ADVERTISEMENT

PHOTOS: ಕೋವಿಡ್-19 ನಡುವೆ ಹಕ್ಕಿ ಜ್ವರ ಭೀತಿ; ಎಚ್ಚರಿಕೆ ಘೋಷಿಸಿದ ಕೇಂದ್ರ ಸರ್ಕಾರ

ದೇಶವೇ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವ ಮಧ್ಯೆ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಭೀತಿಯನ್ನು ಹೆಚ್ಚಿಸಿದೆ. ಈಗಾಗಲೇ ಕೇರಳ, ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲಪ್ರದೇಶ ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಸಾವಿರಾರು ಪಕ್ಷಿಗಳು ಸಾವನ್ನಪ್ಪಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಚ್ಚರಿಕೆ ರವಾನಿಸಿದೆ. ಕೇರಳದಲ್ಲಿ 21000ಕ್ಕೂ ಹೆಚ್ಚು ಹಕ್ಕಿಗಳು, ಹಿಮಾಚಲ ಪ್ರದೇಶದಲ್ಲಿ 2000ಕ್ಕೂ ಹೆಚ್ಚು ವಲಸೆ ಹಕ್ಕಿಗಳು, ಮಧ್ಯ ಪ್ರದೇಶದಲ್ಲಿ 376ಕ್ಕೂ ಹೆಚ್ಚು ಕಾಗೆಗಳು ಮತ್ತು ರಾಜಸ್ಥಾನದಲ್ಲೂ 600ಕ್ಕೂ ಹಕ್ಕಿಗಳು ಸಾವನ್ನಪ್ಪಿವೆ. ಚಿತ್ರ ಕೃಪೆ: (ಪಿಟಿಐ)

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 4:32 IST
Last Updated 6 ಜನವರಿ 2021, 4:32 IST
ಜೈಪುರದಲ್ಲಿ ಅನಾರೋಗ್ಯಕ್ಕೆ ಒಳಗಾದ ಕಾಗೆಯನ್ನು ತಪಾಸಣೆಗಾಗಿ ಒಯ್ಯುತ್ತಿರುವ ಅಧಿಕಾರಿಗಳು
ಜೈಪುರದಲ್ಲಿ ಅನಾರೋಗ್ಯಕ್ಕೆ ಒಳಗಾದ ಕಾಗೆಯನ್ನು ತಪಾಸಣೆಗಾಗಿ ಒಯ್ಯುತ್ತಿರುವ ಅಧಿಕಾರಿಗಳು   
ಸತ್ತ ಕಾಗೆಗಳ ಮಾದರಿ ಪರೀಕ್ಷೆಯಲ್ಲಿ H5N8 ವೈರಸ್ ಪತ್ತೆ
ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಕೆ ಘೋಷಿಸಿದೆ
ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ.
ಕೇರಳದಲ್ಲಿ ರಾಜ್ಯ ವಿಪತ್ತು ಘೋಷಣೆ ಮಾಡಲಾಗಿದೆ.
ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಕ್ಕಿಗಳನ್ನು ನಾಶಗೊಳಿಸಲಾಗುತ್ತಿದೆ.
ಕರ್ನಾಟಕ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ
ಮೈಸೂರು, ಚಾಮರಾಜನಗರ, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುನ್ನೆಚ್ಚೆರಿಕೆ ಕ್ರಮ ಕೈಗೊಳ್ಳುವಂತೆ ಪಶುಸಂಗೋಪನಾ ಇಲಾಖೆ ನಿರ್ದೇಶನ ನೀಡಿದೆ.
ಜಮ್ಮು ಹೊರವಲಯದಲ್ಲಿ ಹಿಮಾಚಲ ಪ್ರದೇಶದಲ್ಲಿ ಹಕ್ಕಿ ಜ್ವರ ಪತ್ತೆಗಾಗಿ ಮಾದರಿಗಳ ಸಂಗ್ರಹ
ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.