ADVERTISEMENT

ವಿಜಯವಾಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ

ಪಿಟಿಐ
Published 4 ಸೆಪ್ಟೆಂಬರ್ 2025, 7:38 IST
Last Updated 4 ಸೆಪ್ಟೆಂಬರ್ 2025, 7:38 IST
<div class="paragraphs"><p>ಏರ್ ಇಂಡಿಯಾ (ಸಾಂದರ್ಭಿಕ ಚಿತ್ರ)</p></div>

ಏರ್ ಇಂಡಿಯಾ (ಸಾಂದರ್ಭಿಕ ಚಿತ್ರ)

   

–ಪಿಟಿಐ ಚಿತ್ರ

ವಿಜಯವಾಡ: ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ವಿಜಯವಾಡದಿಂದ ಬೆಂಗಳೂರಿನ ನಿಗದಿತ ಪ್ರಯಾಣವನ್ನು ರದ್ದುಪಡಿಸಿದೆ.

ADVERTISEMENT

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ ಆಗಲು ವಿಮಾನ ರನ್‌ವೇಯಲ್ಲಿ ಚಲಿಸುತ್ತಿತ್ತು. ಈ ವೇಳೆ ಹಕ್ಕಿ (ಹದ್ದು) ಡಿಕ್ಕಿ ಹೊಡೆಯಿತು. ಇದರಿಂದ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಟೇಕಾಫ್‌ಗೂ ಮುನ್ನವೇ ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನವು ರನ್‌ವೇಯಲ್ಲಿ ಚಲಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.