ನವದೆಹಲಿ: ಹರಿದ್ವಾರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿರುವ ಮದನ್ ಕೌಶಿಕ್ ಅವರನ್ನು ಉತ್ತರಾಖಂಡ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ಪಕ್ಷ ನೇಮಿಸಿದೆ.
ಇದುವರೆಗೆಅಧ್ಯಕ್ಷರಾಗಿದ್ದ ಶಾಸಕ ಬಂಶಿಧರ್ ಭಾಗವತ್ ಅವರು, ನೂತನ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಸರ್ಕಾರದಲ್ಲಿ ಸಚಿವರಾಗುವ ನಿರೀಕ್ಷೆ ಇದೆ.
ಉತ್ತರಾಖಂಡದಲ್ಲಿ ರಜಪೂತರು ಮತ್ತು ಬ್ರಾಹ್ಮಣರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ನೂತನ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ರಜಪೂತ ಸಮುದಾಯಕ್ಕೆ ಸೇರಿದವರು. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಬ್ರಾಹ್ಮಣ ಸಮುದಾಯದವರ ನೇಮಕಾತಿ ನಡೆದಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.