ADVERTISEMENT

ಕೇಜ್ರಿವಾಲ್ ರಾಜೀನಾಮೆಗೆ ಬಿಜೆಪಿ ಪಟ್ಟು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 17:37 IST
Last Updated 4 ಫೆಬ್ರುವರಿ 2023, 17:37 IST
ದೆಹಲಿಯ ಎಎಪಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು–ಪಿಟಿಐ ಚಿತ್ರ
ದೆಹಲಿಯ ಎಎಪಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು–ಪಿಟಿಐ ಚಿತ್ರ   

ನವದಹೆಲಿ (ಪಿಟಿಐ): ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ದೋಷಾರೋಪ ಪಟ್ಟಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹೆಸರಿದ್ದು, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ, ಕಾಂಗ್ರೆಸ್ ಆಗ್ರಹಿಸಿವೆ.

ಬಿಜೆಪಿ ಕಾರ್ಯಕರ್ತರು ದೆಹಲಿಯ ಎಎಪಿ ಕಚೇರಿಯ ಎದುರು ಶನಿವಾರ ಪ್ರತಿಭಟನೆ ನಡೆಸಿದರು. ಕೇಜ್ರಿವಾಲ್ ಅವರಿಗೆ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ರಾಜ್ಯ ಬಿಜೆಪಿ ಘಟಕದ
ಅಧ್ಯಕ್ಷ ವೀರೇಂದ್ರ ಸಚ್‌ದೇವ್ ಹೇಳಿದ್ದಾರೆ.

ಕಾಂಗ್ರೆಸ್‌ ಆಗ್ರಹ:ಆರೋಪಿಗಳಾಗಿರುವ ಮುಖ್ಯಮಂತ್ರಿ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹಾಗೂ ಸಚಿವ ಸತ್ಯೇಂದ್ರ ಜೈನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಅಜಯ್ ಮಾಕನ್ ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.