ADVERTISEMENT

ರೈತರನ್ನು ಕಡೆಗಣಿಸಿದ ಬಿಜೆಪಿ ಸರ್ಕಾರ: ಅಖಿಲೇಶ್ ಯಾದವ್ ವಾಗ್ದಾಳಿ

ಏಜೆನ್ಸೀಸ್
Published 11 ಡಿಸೆಂಬರ್ 2020, 10:19 IST
Last Updated 11 ಡಿಸೆಂಬರ್ 2020, 10:19 IST
ಅಖಿಲೇಶ್‌ ಯಾದವ್‌
ಅಖಿಲೇಶ್‌ ಯಾದವ್‌   

ಲಕ್ನೋ: ಬಿಜೆಪಿ ಸರ್ಕಾರ ರೈತರನ್ನು ಕಡೆಗಣಿಸಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌ ಶುಕ್ರವಾರ ಆರೋಪಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, 'ಇಂತಹ ಚಳಿಯಲ್ಲಿ ರಸ್ತೆಗಿಳಿದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಸಮರ್ಥನೀಯ ಬೇಡಿಕೆಗಳ ಬಗ್ಗೆ ಹೃದಯಹೀನ ಮನೋಭಾವವನ್ನು ಅಳವಡಿಸಿಕೊಳ್ಳುವ ಮೂಲಕ ಬಿಜೆಪಿ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿದೆ' ಎಂದು ಹರಿಹಾಯ್ದಿದ್ದಾರೆ.

ರೈತರ ಪ್ರತಿಭಟನೆಯ ಬಗ್ಗೆ ವಿಶ್ವದಾದ್ಯಂತ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇದು ಭಾರತದ ಪ್ರಜಾಪ್ರಭುತ್ವದ ಹೆಸರಿಗೆ ಧಕ್ಕೆ ತಂದಿದೆ ಎಂದು ಅಖಿಲೇಶ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ನಮಗೆ ಆಹಾರ ನೀಡುವವರ ಮೇಲಿನ ಶೋಷಣೆಯನ್ನು ಬಿಜೆಪಿ ಸರ್ಕಾರ ನಿಲ್ಲಿಸಲಿ. ರೈತರ ಪ್ರತಿಭಟನೆಯು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮರಳಿ ಸ್ಥಾಪಿಸುವ ಚಳುವಳಿಯಾಗಿದೆ ಎಂದು ಅಖಿಲೇಶ್‌ ಹೇಳಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಅಖಿಲೇಶ್‌ ಯಾದವ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.