ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಮಾತನಾಡಿರುವಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ‘ದೇಶದ ಜನರ ಧ್ವನಿಯನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ’ಎಂದು ಆರೋಪಿಸಿದ್ದಾರೆ.
ಶುಕ್ರವಾರ ವಿಡಿಯೊಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ‘ಅಭಿಪ್ರಾಯ ಭೇದಹತ್ತಿಕ್ಕಲು ಬಿಜೆಪಿಯು ವಿವೇಚನಾ ರಹಿತವಾಗಿ ಬಲ ಪ್ರಯೋಗಿಸಿದೆ. ಇದು ಪ್ರಜಾಪ್ರಭುತ್ವದಲ್ಲಿ ಸಮ್ಮತವಲ್ಲ’ಎಂದು ಹೇಳಿದ್ದಾರೆ.
ಸಂವಿಧಾನದ ಆಶಯಗಳನ್ನು ಕಾಪಾಡಲು ಕಾಂಗ್ರೆಸ್ ಸದಾ ಸಿದ್ಧವಿದೆ ಎಂದಿರುವ ಸೋನಿಯಾ ಗಾಂಧಿ, ‘ನಮ್ಮ ಪಕ್ಷವು ವಿದ್ಯಾರ್ಥಿಗಳ ಪರ ನಿಂತಿದೆ. ಜನರ ಮೂಲಭೂತ ಹಕ್ಕು ಹಾಗೂ ಸಂವಿಧಾನದ ಆಶಯಗಳನ್ನು ಕಾಪಾಡಲು ನಾವು ಬದ್ಧರಾಗಿದ್ದೇವೆ’ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.