ADVERTISEMENT

ಕಾಂಗ್ರೆಸ್ ನಾಯಕರು ಸಿಂಗ್‌ರನ್ನು ನೋಡಲು ಹೋಗುವುದಿಲ್ಲ ಎಂದ ಅಮಿತ್ ಮಾಳವೀಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಅಕ್ಟೋಬರ್ 2021, 6:24 IST
Last Updated 14 ಅಕ್ಟೋಬರ್ 2021, 6:24 IST
ಬಿಜೆಪಿ ನಾಯಕ ಅಮಿತ್ ಮಾಳವೀಯ
ಬಿಜೆಪಿ ನಾಯಕ ಅಮಿತ್ ಮಾಳವೀಯ   

ಬೆಂಗಳೂರು: ಅನಾರೋಗ್ಯದ ಕಾರಣ ದೆಹಲಿ ಏಮ್ಸ್‌ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನೋಡಲು ಕಾಂಗ್ರೆಸ್ ನಾಯಕರು ಬರುತ್ತಿಲ್ಲ ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ್ದ ಅಮಿತ್, ನಂತರ ಅದನ್ನು ಡಿಲೀಟ್ ಮಾಡಿದ್ದಾರೆ.

ಮನಮೋಹನ್ ಸಿಂಗ್ ಅವರ ಆರೋಗ್ಯ ವಿಚಾರಿಸಲು ಕೇಂದ್ರ ಆರೋಗ್ಯ ಸಚಿವರು ಹೋಗಿದ್ದಾರೆ, ಆದರೆ ಕಾಂಗ್ರೆಸ್‌ನ ಬಹುತೇಕ ನಾಯಕರು ಸಿಂಗ್ ಅವರ ಕುರಿತು ತಲೆಕೆಡಿಸಿಕೊಂಡಿಲ್ಲ ಎಂದು ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದರು.

ADVERTISEMENT

ಅದಾದ ಬಳಿಕ, ಸ್ವಲ್ಪ ಹೊತ್ತಿನಲ್ಲೇ ಟ್ವೀಟ್ ಡಿಲೀಟ್ ಮಾಡಿದ್ದಾರೆ.

ಅಮಿತ್ ಮಾಳವೀಯ ಟ್ವೀಟ್

ಜ್ವರ ಮತ್ತು ನಿತ್ರಾಣವಾಗಿದ್ದರಿಂದ ಮನಮೋಹನ್ ಸಿಂಗ್ ಅವರನ್ನು ಬುಧವಾರ ದೆಹಲಿ ಏಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ, ಮನಮೋಹನ್ ಸಿಂಗ್ ಅವರು ಬೇಗ ಗುಣಮುಖರಾಗಿರೆಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.