ADVERTISEMENT

ಪಶ್ಚಿಮ ಬಂಗಾಳ: ಬಿಜೆಪಿ ಮುಖಂಡ ಗಾಜಿ ಮೇಲೆ ದುಷ್ಕರ್ಮಿಗಳ ದಾಳಿ

ಪಿಟಿಐ
Published 14 ಫೆಬ್ರುವರಿ 2021, 8:09 IST
Last Updated 14 ಫೆಬ್ರುವರಿ 2021, 8:09 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕೋಲ್ಕತ್ತ: ಬಿಜೆಪಿ ಮುಖಂಡ ಫಿರೋಜ್‌ ಕಮಲ್‌ ಗಾಜಿ ಅಲಿಯಾಸ್‌ ಬಾಬು ಮಾಸ್ಟರ್‌ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಗಾಜಿ ಅವರು ತೀವ್ರ ಗಾಯಗೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.

ಗಾಜಿ ಅವರು ಕೋಲ್ಕತ್ತಕ್ಕೆ ತೆರಳುತ್ತಿದ್ದಾಗ ಬಸಂತಿ ಹೆದ್ದಾರಿಯಲ್ಲಿ ಶನಿವಾರ ದುಷ್ಕರ್ಮಿಗಳು ಕಚ್ಚಾ ಬಾಂಬ್‌ಗಳ ಮೂಲಕ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಘಟನೆಯಲ್ಲಿ ಗಾಜಿ ಮತ್ತು ಅವರ ಚಾಲಕನಿಗೆ ಗಾಯಗಳಾಗಿವೆ. ಇಬ್ಬರನ್ನೂ ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಜಿ ಅವರ ಜೀವಕ್ಕೆ ಅಪಾಯವಿಲ್ಲ, ಆದರೆ ಅವರನ್ನು ನಿಗಾದಲ್ಲಿ ಇಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಘಟನೆ ಕುರಿತು ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಗಾಜಿ ಅವರು ಇತ್ತೀಚೆಗೆ ತೃಣಮೂಲ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ಈ ದಾಳಿಯನ್ನು ಖಂಡಿಸಿರುವ ಬಿಜೆಪಿ ಹಿರಿಯ ಮುಖಂಡ ಸುವೆಂದು ಅಧಿಕಾರಿ, ‘ತೃಣಮೂಲ ಕಾಂಗ್ರೆಸ್‌ನ ಕ್ರಿಮಿನಲ್‌ಗಳ ಕೃತ್ಯವಿದು’ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.