ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೊರ ಜಿಲ್ಲೆಯ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಾಸಿಮ್ ಅಹ್ಮದ್ ಬರಿ ಹಾಗೂ ಅವರ ತಂದೆ, ಸಹೋದರರೊಬ್ಬರನ್ನು ಉಗ್ರರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದಿಲ್ಭಾಗ್ ಸಿಂಗ್ ತಿಳಿಸಿದರು.
ಪೊಲೀಸ್ ಠಾಣೆಯ ಬಳಿಯೇ ಇರುವ ವಾಸಿಮ್ ಅವರ ಮಳಿಗೆ ಮುಂಭಾಗದಲ್ಲಿ ಬುಧವಾರ ರಾತ್ರಿ 9ರ ವೇಳೆಗೆ ಈ ಕೃತ್ಯ ನಡೆದಿದ್ದು, ಉಗ್ರರು ಏಕಾಏಕಿ ವಾಸಿಮ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ವಾಸಿಮ್ ಅವರ ಸಹೋದರ ಉಮರ್ ಹಾಗೂ ತಂದೆ ಬಶೀರ್ ಅಹ್ಮದ್ ಅವರನ್ನು ಬಂಡಿಪೊರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರಿಬ್ಬರೂ ಮೃತಪಟ್ಟಿದ್ದಾರೆ ಎಂದು ಸಿಂಗ್ ತಿಳಿಸಿದರು.
ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.