ದಂತೇವಾಡ: ಛತ್ತೀಸಗಡದ ದಂತೇವಾಡ ಜಿಲ್ಲೆಯ ನಕುಲ್ನರ್ ಪ್ರದೇಶದಲ್ಲಿ ನಕ್ಸಲರು ಎಲ್ಇಡಿ ಸ್ಫೋಟಿಸಿ ದಾಳಿ ನಡೆಸಿದ್ದು,ಈ ದಾಳಿಯಲ್ಲಿ ಬಿಜೆಪಿ ಶಾಸಕ ಭೀಮಾ ಮಾಂಡವಿ ಸೇರಿ ಐದು ಮಂದಿ ಸಾವಿಗೀಡಾಗಿದ್ದಾರೆ.
ಶಾಸಕ ಭೀಮಾ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಈ ದಾಳಿ ನಡೆದಿದೆ.ಸುಧಾರಿತ ಸ್ಫೋಟಕ ವಸ್ತು ಬಳಸಿ ನಡೆಸಿದ ಸ್ಫೋಟ ಇದಾಗಿದ್ದು, ಸ್ಫೋಟದ ತೀವ್ರತೆಗೆ ಐದು ಮಂದಿ ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.