ADVERTISEMENT

ಕೋವಿಡ್‌: ಬಿಜೆಪಿ ಶಾಸಕಿ ಕಿರಣ್‌ ಮಹೇಶ್ವರಿ ನಿಧನ

ಪಿಟಿಐ
Published 30 ನವೆಂಬರ್ 2020, 5:19 IST
Last Updated 30 ನವೆಂಬರ್ 2020, 5:19 IST
ಕಿರಣ್‌ ಮಹೇಶ್ವರಿ
ಕಿರಣ್‌ ಮಹೇಶ್ವರಿ   

ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಅವರು(59) ಕೋವಿಡ್‌ನಿಂದಾಗಿ ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ನಿಧನರಾದರು.

ಕಿರಣ್‌ ಮಹೇಶ್ವರಿ ಅವರು ಮೆಡಂತ ಆಸ್ಪತ್ರೆಯಲ್ಲಿ ಕೋವಿಡ್‌ಗೆ‌ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಮಹೇಶ್ವರಿ ಅವರು ರಾಜ್ಸಾಮಂದ್‌ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ವಿಧಾನಸಭೆ ಸ್ಪೀಕರ್ ಸಿ.ಪಿ ಜೋಶಿ, ಬಿಜೆಪಿ ರಾಜ್ಯ ಅಧ್ಯಕ್ಷ ಸತೀಶ್ ಪೂನಿಯಾ ಮತ್ತು ಇತರ ನಾಯಕರು ಮಹೇಶ್ವರಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ADVERTISEMENT

ಕಿರಣ್ ಮಹೇಶ್ವರಿ ಅವರ ಅಕಾಲಿಕ ನಿಧನದಿಂದ ಬಹಳ ಬೇಸರವಾಗಿದೆ. ಅವರ ಕುಟುಂಬ, ಸ್ನೇಹಿತರಿಗೆ ಸಂತಾಪ ಸೂಚಿಸುತ್ತಿದ್ದೇನೆ ಎಂದು ಅಶೋಕ್‌ ಗೆಹ್ಲೋಟ್‌ ಅವರು ಟ್ವೀಟ್‌ ಮಾಡಿದ್ದಾರೆ. ಸ್ಪೀಕರ್ ಜೋಶಿ ಕೂಡ ಟ್ವೀಟ್‌ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.