ADVERTISEMENT

ಕಾಂಗ್ರೆಸ್‌ ಸೇರಿದ ಜಸ್ವಂತ್‌ ಸಿಂಗ್ ಪುತ್ರ

ಪಿಟಿಐ
Published 17 ಅಕ್ಟೋಬರ್ 2018, 19:21 IST
Last Updated 17 ಅಕ್ಟೋಬರ್ 2018, 19:21 IST
ಮಾನವೇಂದ್ರ ಸಿಂಗ್‌
ಮಾನವೇಂದ್ರ ಸಿಂಗ್‌   

ನವದೆಹಲಿ : ಹಿರಿಯ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಪುತ್ರ ಹಾಗೂ ರಾಜಸ್ಥಾನದ ಬಿಜೆಪಿ ಶಾಸಕ ಮಾನವೇಂದ್ರ ಸಿಂಗ್‌ ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಮಾನವೇಂದ್ರ ಸಿಂಗ್‌ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

‘ಸ್ವಾಭಿಮಾನಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ. ಬಿಜೆಪಿ ತ್ಯಜಿಸುವುದು ಕೇವಲ ನನ್ನ ನಿರ್ಧಾರವಲ್ಲ. ಅದು ಸಂಪೂರ್ಣ ಎಲ್ಲ ಬೆಂಬಲಿಗರ ನಿರ್ಧಾರವಾಗಿತ್ತು’ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ADVERTISEMENT

2014ರ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಸ್ವಂತ್‌ ಸಿಂಗ್‌ ಅವರ ಪರ ಮಾನವೇಂದ್ರ ಸಿಂಗ್‌ ಪ್ರಚಾರ ನಡೆಸಿದ್ದರು. ಆಗ, ಬಿಜೆಪಿ ಮಾನವೇಂದ್ರ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿತ್ತು.

ಬಾರ್ಮರ್‌ ಮತ್ತು ಜೈಸಲ್ಮರ್ ಪ್ರಾಂತ್ಯದ ರಜಪೂತರ ಮತಗಳನ್ನು ಕಾಂಗ್ರೆಸ್‌ನತ್ತ ಸೆಳೆಯುವ ತಂತ್ರವಾಗಿ ಮಾನವೇಂದ್ರ ಸಿಂಗ್ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆಮಾಡಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.