ADVERTISEMENT

ಅನುಚಿತ ವರ್ತನೆ: ಬಿಹಾರ ಬಿಜೆಪಿ ಶಾಸಕ ಕಲಾಪದಿಂದ ಎರಡು ದಿನ ಅಮಾನತು

ಪಿಟಿಐ
Published 14 ಮಾರ್ಚ್ 2023, 16:05 IST
Last Updated 14 ಮಾರ್ಚ್ 2023, 16:05 IST
 ಬಿಹಾರ ವಿಧಾನಸಭೆಯ ಮುಖ್ಯ ಪ್ರವೇಶದ್ವಾರದ ಮುಂದೆ ಕುಳಿತು ಸರ್ಕಾರದ ವಿರುದ್ಧ ಬಿಜೆಪಿ ಸದಸ್ಯರು ಧರಣಿ ನಡೆಸಿದರು –ಪಿಟಿಐ ಚಿತ್ರ
 ಬಿಹಾರ ವಿಧಾನಸಭೆಯ ಮುಖ್ಯ ಪ್ರವೇಶದ್ವಾರದ ಮುಂದೆ ಕುಳಿತು ಸರ್ಕಾರದ ವಿರುದ್ಧ ಬಿಜೆಪಿ ಸದಸ್ಯರು ಧರಣಿ ನಡೆಸಿದರು –ಪಿಟಿಐ ಚಿತ್ರ   

ಪಟ್ನಾ: ಅನುಚಿತ ವರ್ತನೆ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಹಾರ ಬಿಜೆಪಿ ಶಾಸಕ ಲಖೇಂದ್ರ ರೌಷಣ್‌ ಅವರನ್ನು ವಿಧಾನಸಭಾ ಕಲಾಪದಿಂದ ಎರಡು ದಿನ ಅಮಾನತುಗಳಿಸಲಾಗಿದೆ.

ಸ್ಪೀಕರ್ ಅವಧ್ ಬಿಹಾರಿ ಚೌಧರಿ ಅವರ ನಿರ್ಧಾರವನ್ನು ಖಂಡಿಸಿ ಬಿಜೆಪಿ ಶಾಸಕರು ಗದ್ದಲ ಎಬ್ಬಿಸಿ ಕಲಾಪದಿಂದ ಹೊರನಡೆದರು. ಆದಾಗ್ಯೂ ಸ್ಪೀಕರ್‌ ನಿರ್ಧಾರವನ್ನು ಸರ್ಕಾರ ಪ್ರಶಂಸಿಸಿತು.

ಚೌಧರಿ ಅವರು ಅಮಾನತು ಮಾಡಿ ಆದೇಶಿಸಿದ ನಂತರ ಲಖೇಂದ್ರ ರೌಷಣ್‌ ಅವರು ಮಾತನಾಡಿ, ‘ಮೈಕ್ರೋಫೋನ್‌ ಕಿತ್ತು ಬಿಸಾಡಿಲ್ಲ’ ಎಂದು ವಾದ ಮಾಡಿದರು.

ADVERTISEMENT

‘ಕಲಾಪದಲ್ಲಿ ಭಾಗಿಯಾಗಿದ್ದೆ. ಪ್ರಶ್ನೋತ್ತರ ಅವಧಿಯಲ್ಲಿ ನನ್ನ ಸರದಿ ಬಂದಾಗ ಮೈಕ್ರೊಫೋನ್‌ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಸರಿಪಡಿಸಲು ಪ್ರಯತ್ನಿಸಿದೆ. ಆಗ ಅದು ಕಿತ್ತು ಬಂತು’ ಎಂದು ಹೇಳಿದರು.

ಸತ್ಯ ದೇವ್‌ ರಾಮ್ ಅವರು ನನ್ನ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿದ್ದಾರೆ. ದುರ್ನಡತೆ ಆರೋಪದಲ್ಲಿ ನನ್ನನ್ನು ತಪ್ಪಿತಸ್ಥನಾಗಿ ಮಾಡಲಾಗಿದೆ. ದಲಿತ ಶಾಸಕನಿಗೆ ಈ ರೀತಿಯಾಗಿ ಕಿರುಕುಳ ನೀಡಬಾರದು ಎಂದು ಹೇಳಿದರು.

ಈ ನಡುವೆ ಸದನದಲ್ಲಿ ಕೆಲ ಕಾಲ ಗದ್ದಲ ಉಂಟಾಗಿ, ಬಿಜೆಪಿ ಸದಸ್ಯರು ಕಲಾಪ ಬಹಿಷ್ಕರಿಸಿ ಹೊರನಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.