ADVERTISEMENT

ಶರ್ಜೀಲ್ ನಂತಹ ವ್ಯಕ್ತಿಗಳಿಗೆ ಗುಂಡಿಕ್ಕಬೇಕು: ಬಿಜೆಪಿ ಶಾಸಕ ಸಂಗೀತ್ ಸೋಮ್

​ಪ್ರಜಾವಾಣಿ ವಾರ್ತೆ
Published 31 ಜನವರಿ 2020, 4:31 IST
Last Updated 31 ಜನವರಿ 2020, 4:31 IST
ಉತ್ತರ ಪ್ರದೇಶದ ಬಿಜೆಪಿ ಶಾಸಕ ಸಂಗೀತ್ ಸೋಮ್
ಉತ್ತರ ಪ್ರದೇಶದ ಬಿಜೆಪಿ ಶಾಸಕ ಸಂಗೀತ್ ಸೋಮ್   

ನವದೆಹಲಿ: ಸಿಎಎ ವಿರುದ್ಧ ಪ್ರತಿಭಟನೆ ನಡೆಸಿ ದೇಶ ಒಡೆಯುವ ಕುರಿತು ಮಾತನಾಡುವ ಶರ್ಜೀಲ್ ಇಮಾಮ್ ನಂತಹ ವ್ಯಕ್ತಿಗಳಿಗೆ ಸಾರ್ವಜನಿಕವಾಗಿ ಗುಂಡು ಹೊಡೆದು ಕೊಲ್ಲಬೇಕು ಎಂದು ಬಿಜೆಪಿ ಶಾಸಕ ಸಂಗೀತ್ ಸೋಮ್ ಹೇಳಿಕೆ ನೀಡಿದ್ದಾರೆ.

ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಕುಳಿತುಕೊಳ್ಳುವ ಮಹಿಳೆಯರಿಗೆ ಕೆಲಸವಿಲ್ಲ. ಇಂತಹ ಪ್ರತಿಭಟನೆಗಳಿಗೆ ಹಣಕಾಸಿನ ಮೂಲ ಯಾವುದು ಎಂಬುದರ ಕುರಿತು ತನಿಖೆಯಾಗಬೇಕು. ಇಮಾಮನ್ ನಂತಹ ವ್ಯಕ್ತಿಗಳು ಸಿಎಎಯಿಂದಾಗಿ ದೇಶ ಇಬ್ಭಾಗ ಮಾಡಬೇಕೆಂದು ಮಾತನಾಡುತ್ತಾರೆ. ಇಂತಹ ವ್ಯಕ್ತಿಗಳಿಗೆ ಸಾರ್ವಜನಿಕವಾಗಿ ಗುಂಡು ಹೊಡೆಯಬೇಕು ಎಂದು ಸಂಗೀತ್ ಸೋಮ್ ಹೇಳಿಕೆ ನೀಡಿದ್ದಾರೆ.

ಬಜೆಟ್ ಮಾಹಿತಿಗೆ: www.prajavani.net/budget-2020

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.