ADVERTISEMENT

ಮಹಾರಾಷ್ಟ್ರ: ಅಮಾನತು ನಿರ್ಣಯ ಪ್ರಶ್ನಿಸಿ ‘ಸುಪ್ರೀಂ’ ಮೆಟ್ಟಿಲೇರಿದ ಶಾಸಕರು

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 14:04 IST
Last Updated 22 ಜುಲೈ 2021, 14:04 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆಯ ಕಲಾಪದ ವೇಳೆ ಸ್ಪೀಕರ್‌ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಒಂದು ವರ್ಷದವರೆಗೆ ಸದನದಿಂದ ಅಮಾನತುಗೊಂಡಿರುವ ಬಿಜೆಪಿಯ 12 ಶಾಸಕರು, ಅಮಾನತು ಆದೇಶ ಪ್ರಶ್ನಿಸಿ ಗುರುವಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ.

‘ಈ ಶಾಸಕರನ್ನು ಒಂದು ವರ್ಷ ಅಮಾನತುಗೊಳಿಸುವಂತೆ ವಿಧಾನಸಭೆ ಅಂಗೀಕರಿಸಿದ ನಿರ್ಣಯವನ್ನು ಪ್ರಶ್ನಿಸಿ, ಶಾಸಕರ ಪರವಾಗಿ ತಾನು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದೇನೆ’ ಎಂದು ವಕೀಲ ಅಭಿಕಲ್ಪ್ ಪ್ರತಾಪ್ ಸಿಂಗ್ ಹೇಳಿದ್ದಾರೆ.

ಜುಲೈ 5ರಂದು ಸ್ಪೀಕರ್ ಕೊಠಡಿಯಲ್ಲಿ ಸ್ಪೀಕರ್‌ ಭಾಸ್ಕರ್ ಜಾಧವ್ ಅವರೊಂದಿಗೆ ಈ 12 ಶಾಸಕರು ಕೆಟ್ಟದಾಗಿ ವರ್ತಿಸಿದರೆಂದು ರಾಜ್ಯ ಸರ್ಕಾರ ಆರೋಪಿಸಿದ್ದರಿಂದ ಇವರನ್ನು ಅಮಾನತುಗೊಳಿಸಲಾಗಿತ್ತು.

ADVERTISEMENT

ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅನಿಲ್‌ ಪರಬ್ ಈ 12 ಶಾಸಕರನ್ನು ಅಮಾನತುಗೊಳಿಸುವ ನಿರ್ಣಯ ಮಂಡಿಸಿದ್ದರು. ಅದನ್ನು ಧ್ವನಿಮತದಿಂದ ಅಂಗೀಕರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.