ನವದೆಹಲಿ: ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ಗೆ‘ಐಸಿಸ್ ಕಾಶ್ಮೀರ’ದಿಂದ ಮತ್ತೊಂದು ಕೊಲೆ ಬೆದರಿಕೆ ಬಂದಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಬುಧವಾರ ಸಂಜೆ ಟ್ವೀಟ್ ಮಾಡಿರುವ ಸುದ್ದಿಸಂಸ್ಥೆ ಎಎನ್ಐ, ‘ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ಗೆ ‘ಐಸಿಸ್ ಕಾಶ್ಮೀರ’ದಿಂದ ಎರಡನೇ ಕೊಲೆ ಬೆದರಿಕೆ ಬಂದಿದೆ. ಗಂಭೀರ್ ನಿವಾಸದ ಹೊರಗಿನ ದೃಶ್ಯಗಳನ್ನು ಹೊಂದಿರುವ ವಿಡಿಯೊವನ್ನು ಬೆದರಿಕೆಯ ಇ-ಮೇಲ್ನೊಂದಿಗೆ ಲಗತ್ತಿಸಲಾಗಿದೆ ಎಂಬುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ‘ ಎಂದು ಹೇಳಿದೆ.
‘ಐಸಿಸ್ ಕಾಶ್ಮೀರದಿಂದ ಗೌತಮ್ ಗಂಭೀರ್ ಅವರಿಗೆ ಇಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದ್ದು, ಅವರ ನಿವಾಸದ ಸುತ್ತ ಭದ್ರತೆ ಹೆಚ್ಚಿಸಲಾಗಿದೆ’ಎಂದು ಪೊಲೀಸ್ ಅಧಿಕಾರ ಶ್ವೇತಾ ಚೌಹಾಣ್ ಬುಧವಾರ ಬೆಳಿಗ್ಗೆ ತಿಳಿಸಿದ್ದರು.
ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ನನ್ನ ‘ದೊಡ್ಡಣ್ಣ’ ಇದ್ದಂತೆ ಎಂದಿರುವ ಪಂಜಾಬ್ನ ಕಾಂಗ್ರೆಸ್ ಮುಖಂಡ ನವಜೋತ್ ಸಿಧು ಹೇಳಿಕೆ ನಾಚಿಕೆಗೇಡಿನ ವಿಚಾರ ಎಂದು ಗೌತಮ್ ಗಂಭೀರ್ ವಾಗ್ದಾಳಿ ನಡೆಸಿದ್ದರು. ಈ ರೀತಿ ಕೆಟ್ಟ ಹೇಳಿಕೆ ಕೊಡುವ ಮುನ್ನ ನಿಮ್ಮ ಮಕ್ಕಳನ್ನು ಗಡಿಗೆ ಕಳುಹಿಸಿ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.