ನವದೆಹಲಿ: ಮಧ್ಯಪ್ರದೇಶದ ಬಿಜೆಪಿ ಸಂಸದ ವೀರೇಂದ್ರ ಕುಮಾರ್ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಳ್ಳಲಿದ್ದಾರೆ.
65 ವರ್ಷದ ಕುಮಾರ್ ಅವರು ಏಳನೇ ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದುಪ್ರಸ್ತುತ ಟಿಕಾಮಘಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 17ನೇ ಲೋಕಸಭೆಯ ಪ್ರಥಮ ಅಧಿವೇಶನ ಜೂನ್ 17ರಿಂದ ಜುಲೈ 26ರವರೆಗೆ ನಡೆಯಲಿದ್ದು, ಹಂಗಾಮಿ ಸ್ಪೀಕರ್ ಅವರು ನೂತನವಾಗಿ ಆಯ್ಕೆಯಾದ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಲೋಕಸಭೆಯ ನೂತನ ಸ್ಪೀಕರ್ ಅವರ ಚುನಾವಣೆಯ ಪ್ರಕ್ರಿಯೆ ಉಸ್ತುವಾರಿ ಸಹ ಹಂಗಾಮಿ ಸ್ಪೀಕರ್ ಅವರು ವಹಿಸಿಕೊಳ್ಳಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.