ನವದೆಹಲಿ: ‘ಕರ್ನಾಟಕದ ಸಮ್ಮಿಶ್ರ ಸರ್ಕಾರದ ಪತನದ ಹಿಂದೆ ನಮ್ಮ ಪಾತ್ರವಿಲ್ಲ. ಕಾಂಗ್ರೆಸ್– ಜೆಡಿಎಸ್ ಮುಖಂಡರ ನಡುವಿನ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಪತನಗೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು.
ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಹೊಸದಾಗಿ ರಚಿತವಾಗಲಿರುವ ಸರ್ಕಾರ ಸ್ಥಿರ ಆಡಳಿತ ನೀಡಲಿದೆ ಎಂದು ಭರವಸೆ ನೀಡಿದರು.
‘75 ವರ್ಷ ವಯಸ್ಸು ಮೀರಿರುವ ಯಡಿಯೂರಪ್ಪ ಅವರಿಗೆ ಪ್ರಮುಖ ಸ್ಥಾನ ನೀಡಲಾಯಿತಲ್ಲ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಯಡಿಯೂರಪ್ಪ ಅವರೇ ನಮ್ಮ ನೈಜ ಆಯ್ಕೆ. ಪಕ್ಷವು ಕೆಲವೊಮ್ಮೆ ವಯಸ್ಸಿನ ಮಿತಿಯ ಬಗ್ಗೆ ಇರುವ ನಿಯಮಗಳನ್ನು ಸಡಿಲಿಸಬೇಕಾಗುತ್ತದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.