ಅಗರ್ತಲ: ತ್ರಿಪುರಾದಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.
ತ್ರಿಪುರಾದಿಂದ ತೆರವಾಗಿರುವ ಒಂದು ಸ್ಥಾನಕ್ಕೆ ಸೆಪ್ಟೆಂಬರ್ 22ರಂದು ಚುನಾವಣೆ ನಡೆಯಲಿದೆ.
ಪಕ್ಷದ ಅಭ್ಯರ್ಥಿಯನ್ನಾಗಿ ದೇವ್ ಅವರನ್ನು ಕೇಂದ್ರ ಚುನಾವಣಾ ಸಮಿತಿ ನಾಮ ನಿರ್ದೇಶನ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶುಕ್ರವಾರ ತಿಳಿಸಿದ್ದಾರೆ.
‘ತ್ರಿಪುರಾದಿಂದ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ಅವರಿಗೆ ಧನ್ಯವಾದಗಳು. ತ್ರಿಪುರಾದ ಜನರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡಲು ಬದ್ಧನಾಗಿದ್ದೇನೆ’ ಎಂದು ಬಿಪ್ಲವ್ ಕುಮಾರ್ ದೇವ್ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.