ADVERTISEMENT

ಇಂಧನ ಬೆಲೆ ಇಳಿಕೆಯು ಬಿಜೆಪಿಯ ಚುನಾವಣಾ ಕಾರ್ಯತಂತ್ರವಾಗಿತ್ತು: ಖರ್ಗೆ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಮಾರ್ಚ್ 2022, 6:11 IST
Last Updated 30 ಮಾರ್ಚ್ 2022, 6:11 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ತೈಲ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ.

ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ಜೊತೆ ಮಾತನಾಡಿರುವ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ತೈಲ ಬೆಲೆ ಏರಿಕೆ ವಿರುದ್ಧ ಮಾರ್ಚ್ 31ರಂದು ದೆಹಲಿಯ ವಿಜಯ್‌ ಚೌಕ್‌ನಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

‘ಇಂಧನ ಬೆಲೆಗಳನ್ನು ಇಳಿಸಿದ್ದು ಬಿಜೆಪಿಯ ಚುನಾವಣಾ ಕಾರ್ಯತಂತ್ರವಾಗಿತ್ತು. ಈಗ ಅವರು(ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ) ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ನೆಪದಲ್ಲಿ ತೈಲ ಬೆಲೆಯನ್ನು ಹೆಚ್ಚಿಸುವ ಮೂಲಕ ಸರಿದೂಗಿಸುತ್ತಿದ್ದಾರೆ’ ಎಂದು ಖರ್ಗೆ ಹರಿಹಾಯ್ದಿದ್ದಾರೆ.

ADVERTISEMENT

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರಿಗೆ ತಲಾ 80 ಪೈಸೆಯಷ್ಟು ಹೆಚ್ಚಿಸಿವೆ.ಇದರಿಂದಾಗಿ, ಕಳೆದ ಒಂಬತ್ತು ದಿನಗಳಲ್ಲಿ ಎಂಟು ಬಾರಿ ತೈಲ ದರದಲ್ಲಿ ಏರಿಕೆ ಕಂಡುಬಂದಿದೆ. ಪ್ರತಿ ಲೀಟರಿಗೆ ₹5.60ರಷ್ಟು ಹೆಚ್ಚಿಸಿದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.