ಜೈಪುರ: ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದ್ದು, ಕೆಲವು ಶಾಸಕರಿಗೆ ತಲಾ ₹25 ಕೋಟಿ ನೀಡುವ ಆಮಿಷವೊಡ್ಡಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.
ಮಧ್ಯಪ್ರದೇಶದ ರೀತಿಯಲ್ಲೇ ರಾಜಸ್ಥಾನದಲ್ಲೂಕಾಂಗ್ರೆಸ್ ಸರ್ಕಾರ ಉರುಳಿಸುವ ಯೋಜನೆಯನ್ನು ಬಿಜೆಪಿ ರೂಪಿಸಿದೆ. ಇದಕ್ಕಾಗಿಯೇ ಅಪಾರ ಪ್ರಮಾಣದಲ್ಲಿ ಹಣದ ವರ್ಗಾವಣೆ ನಡೆಯುತ್ತಿದೆ. ₹10 ಕೋಟಿ ಮುಂಗಡ ನೀಡುವುದಾಗಿಯೂ ಕೆಲವು ಶಾಸಕರಿಗೆ ಬಿಜೆಪಿ ತಿಳಿಸಿದೆ ಎಂದು ಅವರು ದೂರಿದ್ದಾರೆ.
ರಾಜಸ್ಥಾನ ಮತ್ತು ಗುಜರಾತ್ನಲ್ಲಿನ ಶಾಸಕರನ್ನು ಸೆಳೆಯಲು ಸಾಧ್ಯವಾಗದ ಕಾರಣ ರಾಜ್ಯಸಭೆ ಚುನಾವಣೆಯನ್ನು ಉದ್ದೇಶಪೂರ್ವಕವಾಗಿಯೇ ಮುಂದೂಡಲಾಗಿತ್ತು. ಕಾಂಗ್ರೆಸ್ ಶಾಸಕರು ಒಗ್ಗಟ್ಟಾಗಿದ್ದು, ಎಚ್ಚರವಹಿಸಿದ್ದಾರೆ. ಯಾವುದೇ ಆಮಿಷಗಳಿಗೆ ಬಲಿಯಾಗುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ರೆಸಾರ್ಟ್ಗೆ ಶಾಸಕರು:
ಜೂನ್ 19ರಂದು ನಡೆಯುವ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರನ್ನು ದೆಹಲಿ ಹೆದ್ದಾರಿಯಲ್ಲಿರುವಜೈಪುರದ ರೆಸಾರ್ಟ್ವೊಂದಕ್ಕೆ ಕರೆದೊಯ್ಯಲಾಗಿದೆ.
ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷವೊಡ್ಡಲಾಗಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಮಹೇಶ್ ಜೋಶಿಭ್ರಷ್ಟಾಚಾರ ನಿಗ್ರಹ ದಳದ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ. ಕರ್ನಾಟಕ ಮತ್ತು ಮಧ್ಯಪ್ರದೇಶ ರೀತಿಯಲ್ಲಿ ಸರ್ಕಾರವನ್ನು ಉರುಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.
200 ಸದಸ್ಯರ ವಿಧಾನಸಭೆಯಲ್ಲಿ ಕಾಂಗ್ರೆಸ್ 107 ಸದಸ್ಯರ ಬಲ ಹೊಂದಿದೆ. ಜತೆಗೆ, 13 ಪಕ್ಷೇತರ ಶಾಸಕರಲ್ಲಿ 12 ಮಂದಿ ಕಾಂಗ್ರೆಸ್ಗೆ ಬೆಂಬಲ ನೀಡುತ್ತಿದ್ದಾರೆ.
ಸಾಬೀತುಪಡಿಸಲು ಬಿಜೆಪಿ ಸವಾಲು:
ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿರುವುದನ್ನು ಸಾಬೀತುಪಡಿಸುವಂತೆರಾಜ್ಯ ಬಿಜೆಪಿ ಘಟಕದಅಧ್ಯಕ್ಷ ಸತೀಶ್ ಪೂನಿಯಾ ಸವಾಲು ಹಾಕಿದ್ದಾರೆ.
ಪಕ್ಷದಶಾಸಕರ ಬಗ್ಗೆಯೇ ಕಾಂಗ್ರೆಸ್ಗೆ ವಿಶ್ವಾಸವಿಲ್ಲ. ಕಳೆದ 55 ವರ್ಷಗಳಿಂದ ಆಮಿಷವೊಡ್ಡುವ ರಾಜಕೀಯ ಮಾಡಿರುವ ಕಾಂಗ್ರೆಸ್ ಈಗ ಬಿಜೆಪಿಯನ್ನು ದೂರುತ್ತಿದೆ ಎಂದು ಟೀಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.