ADVERTISEMENT

ಮಹಿಳೆಯ ಕೊಲೆಗೆ ಬಿಜೆಪಿಯಿಂದಲೇ ಸಂಚು: ಮಮತಾ ಬ್ಯಾನರ್ಜಿ ಗಂಭೀರ ಆರೋಪ

ಏಜೆನ್ಸೀಸ್
Published 30 ಮಾರ್ಚ್ 2021, 10:39 IST
Last Updated 30 ಮಾರ್ಚ್ 2021, 10:39 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ನಂದಿಗ್ರಾಮ: ಬಿಜೆಪಿಯು ಅದೇ ಪಕ್ಷದ ಮಹಿಳೆಯೊಬ್ಬರನ್ನು ಹತ್ಯೆ ಮಾಡಲು ಸಂಚು ರೂಪಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.

ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿಯು ಅದೇ ಪಕ್ಷದ ಮಹಿಳೆಯೊಬ್ಬರನ್ನು ಹತ್ಯೆ ಮಾಡುವ ಮತ್ತೊಂದು ಸಂಚು ರೂಪಿಸಿದೆ. ಬಳಿಕ ಕೊಲೆ ಆರೋಪವನ್ನು ಬಂಗಾಳದ ಜನರ ಮೇಲೆ ಹೊರಿಸಲು ಮುಂದಾಗಿದೆ. ಉತ್ತರಪ್ರದೇಶ ಮತ್ತು ಬಿಹಾರದಿಂದ ಕರೆಸಿಕೊಂಡಿರುವ ಗೂಂಡಾಗಳ ಮೂಲಕ ಬಿಜೆಪಿಯು ಹತ್ಯೆಗೆ ಸಂಚು ರೂಪಿಸಿದೆ ಎಂದು ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರೊಬ್ಬರ ತಾಯಿ ಮೇಲೆ ಇತ್ತೀಚೆಗೆ ಹಲ್ಲೆ ನಡೆದಿತ್ತು. ಗಂಭಿರವಾಗಿ ಗಾಯಗೊಂಡಿದ್ದ ಅವರು ನಿನ್ನೆ ಮೃತಪಟ್ಟಿದ್ದರು. ಮಹಿಳೆ ಮೇಲೆ ಟಿಎಂಸಿಯೇ ಹಲ್ಲೆ ನಡೆಸಿದೆ ಎಂದು ಬಿಜೆಪಿ ಆರೋಪಿಸಿತ್ತು. ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಕೂಡ ಟಿಎಂಸಿಯನ್ನು ದೂರಿದ್ದಾರೆ. ಇದರ ಬೆನ್ನಲ್ಲೇ ಮಮತಾ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿಯು ಉತ್ತರಪ್ರದೇಶ ಮತ್ತು ಬಿಹಾರದಿಂದ ಗೂಂಡಾಗಳನ್ನು ಕರೆಸಿಕೊಂಡು ರಾಜ್ಯದಲ್ಲಿ ಹಿಂಸಾಚಾರ ನಡೆಸುತ್ತಿದೆ ಎಂದು ಸೋಮವಾರ ಮಮತಾ ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.