ADVERTISEMENT

ಪುದುಚೇರಿ ಮುಖ್ಯಮಂತ್ರಿಯಾಗಿ ರಂಗಸ್ವಾಮಿ ಪ್ರಮಾಣ ವಚನ ಸ್ವೀಕಾರ

ಪಿಟಿಐ
Published 7 ಮೇ 2021, 9:55 IST
Last Updated 7 ಮೇ 2021, 9:55 IST
ಎನ್‌. ರಂಗಸ್ವಾಮಿ
ಎನ್‌. ರಂಗಸ್ವಾಮಿ   

ಪುದುಚೇರಿ: ಇಲ್ಲಿನ ‘ರಾಜ್‌ ನಿವಾಸ್’ದಲ್ಲಿ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಪುದುಚೇರಿಯ ಮುಖ್ಯಮಂತ್ರಿಯಾಗಿ ಎಐಎನ್‌ಆರ್‌ಸಿ ನಾಯಕ ಎನ್‌. ರಂಗಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಲೆಫ್ಟಿನೆಂಟ್‌ ಗವರ್ನರ್‌ ತಮಿಳುಸೈ ಸೌಂದರರಾಜನ್‌ ಅವರು ರಂಗಸ್ವಾಮಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ರಂಗಸ್ವಾಮಿ ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ.

ತಮಿಳಿನಲ್ಲಿ ಮತ್ತು ದೇವರ ಹೆಸರಿನಲ್ಲಿ ರಂಗಸ್ವಾಮಿ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಿದರು.

ADVERTISEMENT

ಮುಂದಿನ ಕೆಲ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಎಐಎನ್‌ಆರ್‌ಸಿ ಮತ್ತು ಬಿಜೆಪಿ ಒಳಗೊಂಡ ಮೈತ್ರಿ ಸರ್ಕಾರದ ನೇತೃತ್ವವನ್ನು ರಂಗಸ್ವಾಮಿ ವಹಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.