ADVERTISEMENT

ಇಸ್ಲಾಂ ವಿರುದ್ಧ ಆಕ್ಷೇ‍ಪಾರ್ಹ ಟ್ವೀಟ್‌: ಬಿಜೆಪಿ ಐ.ಟಿ ಸೆಲ್‌ ಉಸ್ತುವಾರಿಗೆ ಕೊಕ್

ಪಿಟಿಐ
Published 8 ಜುಲೈ 2022, 1:49 IST
Last Updated 8 ಜುಲೈ 2022, 1:49 IST
ಅರುಣ್‌ ಯಾದವ್‌
ಅರುಣ್‌ ಯಾದವ್‌   

ಗುರುಗ್ರಾಮ: ಇಸ್ಲಾಂ ವಿರುದ್ಧ ಮಾಡಿದ್ದ ಟ್ವೀಟ್‌ಗೆ ಸಂಬಂಧಿಸಿದಂತೆ ಹರಿಯಾಣ ಐ.ಟಿ ಘಟಕದ ಉಸ್ತುವಾರಿಯಾಗಿದ್ದ ಅರುಣ್‌ ಯಾದವ್‌ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ.

ಅರುಣ್‌ ಯಾದವ್ ಅವರನ್ನು ಪದಚ್ಯುತಿಗೊಳಿಸಿರುವ ಕುರಿತುಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಒ.ಪಿ.ಧನ್‌ಕರ್‌ ಹೇಳಿಕೆ ನೀಡಿದ್ದಾರೆ. ಆದರೆ, ಇದಕ್ಕೆ ಯಾವುದೇ ಕಾರಣ ನೀಡಿಲ್ಲ.

ಯಾದವ್‌ ಅವರು 2017ರಲ್ಲಿ ಮಾಡಿದ್ದ ಟ್ವೀಟ್‌ ಈಚೆಗೆ ಸಾಮಾಜಿಕ ಜಾಲತಾಣ ದಲ್ಲಿ ಸಾಕಷ್ಟು ಹರಿದಾಡಿತ್ತು. ಇದರ ಹಿಂದೆಯೇ ಅವರನ್ನು ಬಂಧಿಸಬೇಕು ಎಂಬ ಆಗ್ರಹವು ವ್ಯಾಪಕವಾಗಿ ಕೇಳಿಬಂದಿತ್ತು. ಆದರೆ, ಯಾದವ್‌ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.