ADVERTISEMENT

ಭ್ರಷ್ಟಾಚಾರ, ಕಪ್ಪು ಹಣ ಹೂಡಿಕೆಗೆ ನೋಟು ರದ್ದತಿಯಿಂದ ಹೊಡೆತ: ಬಿಜೆಪಿ

ಪಿಟಿಐ
Published 8 ನವೆಂಬರ್ 2020, 12:10 IST
Last Updated 8 ನವೆಂಬರ್ 2020, 12:10 IST
ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್‌ ಚಂದ್ರಶೇಖರ್‌ ಮಾತನಾಡಿದರು. -ಪಿಟಿಐ ಚಿತ್ರ
ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್‌ ಚಂದ್ರಶೇಖರ್‌ ಮಾತನಾಡಿದರು. -ಪಿಟಿಐ ಚಿತ್ರ   

ನವದೆಹಲಿ: ನೋಟು ರದ್ದತಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಕಳೆದುಹೋದ ದಶಕದಲ್ಲಿ ನಡೆಸಿದ ಭ್ರಷ್ಟಾಚಾರ ಮತ್ತು ಕಪ್ಪು ಹಣದ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ದೇಶದಲ್ಲಿ ನೋಟು ರದ್ದತಿಯಾಗಿ ಇಂದಿಗೆ ನಾಲ್ಕು ವರ್ಷ. ನವೆಂಬರ್‌ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹500 ಮತ್ತು ₹1,000 ಮುಖಬೆಲೆ ನೋಟುಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದರು.

ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್‌ ಚಂದ್ರಶೇಖರ್‌, ‘ರಾಕ್ಷಸೀಕರಣ ದೇಶಕ್ಕೆ ಒಳ್ಳೆಯದು’ ಎಂದು ಹೇಳಿದರು.

ADVERTISEMENT

‘ನೋಟು ರದ್ದತಿಯಿಂದ ಆರ್ಥಿಕತೆಯನ್ನು ಸ್ವಚ್ಛಗೊಳಿಸಲಾಗಿದೆ. ಅನೌಪಚಾರಿಕ ಆರ್ಥಿಕ ವಲಯ ಒಟ್ಟುಗೂಡಿಸುವ ಮೂಲಕ ಔಪಚಾರಿಕ ಆರ್ಥಿಕತೆಯನ್ನು ಉತ್ತೇಜಿಸಿದೆ. ಮತ್ತು ಸಮಾಜದ ಎಲ್ಲಾ ವರ್ಗದವರಿಗೆ ಅಭೂತಪೂರ್ವ ಆರ್ಥಿಕ ಉತ್ತೇಜನಗಳನ್ನು ನೀಡಿದೆ. ಜೊತೆಗೆ, ಆದಾಯ ಗಳಿಕೆಗೆ ಅನುಕೂಲವಾಗಿದೆ’ ಎಂದು ಚಂದ್ರಶೇಖರ್‌ ಹೇಳಿದರು.

ರಾಹುಲ್‌ ಗಾಂಧಿ ಹೆಸರು ಹೇಳದೆ ವಾಗ್ದಾಳಿ ನಡೆಸಿದ ಚಂದ್ರಶೇಖರ್, ‘2004ರಿಂದ 2009 ಮತ್ತು 2009 ರಿಂದ 2014ರ ಅವಧಿಯಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅತಿ ಹೆಚ್ಚು ಭ್ರಷ್ಟಾಚಾರ ಮತ್ತು ಕಪ್ಪು ಹಣ ಸಂಗ್ರಹಿಸಿತ್ತು’ ಎಂದು ಆರೋಪಿಸಿದರು.

2014ರ ನಂತರ ಮೋದಿ ಸರ್ಕಾರ ಆರ್ಥಿಕತೆಯನ್ನು ಪರಿವರ್ತಿಸಲು ಹಲವು ಯೋಜನೆಗಳನ್ನು ಜಾರಿಗೊಳಿಸಿತು. ಇದರಿಂದ ಭ್ರಷ್ಟಾಚಾರ ಮತ್ತು ಸೋರಿಕೆಯಿಲ್ಲದೆ ಸರ್ಕಾರಿ ಸಂಪನ್ಮೂಲಗಳು ಬಡವರಿಗೆ ಮತ್ತು ದೀನ ದಲಿತರಿಗೆ ತಲುಪಿಸುವುದು ಸಾಧ್ಯವಾಯಿತು ಎಂದು ಹೇಳಿದರು.

ಕಳೆದ ಆರು ವರ್ಷಗಳಲ್ಲಿ ಮೋದಿ ಸರ್ಕಾರ ಕೈಗೊಂಡ ಆರ್ಥಿಕ ನಿರ್ಧಾರಗಳು ಭಾರತದ ಆರ್ಥಿಕತೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಿವೆ ಎಂದು ಚಂದ್ರಶೇಖರ್‌ ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.