ADVERTISEMENT

ಜನರ ಬಗ್ಗೆ ಕಾಳಜಿ ಇದ್ದರೆ ಅಧಿವೇಶನದಲ್ಲಿ ಬಿಜೆಪಿ ಸಹಕರಿಸಲಿ -ಸಂಜಯ್ ರಾವುತ್‌

ಶಿವಸೇನೆ ಸಂಸದ ಸಂಜಯ್ ರಾವುತ್‌

ಪಿಟಿಐ
Published 4 ಜುಲೈ 2021, 11:23 IST
Last Updated 4 ಜುಲೈ 2021, 11:23 IST
ಸಂಜಯ್ ರಾವುತ್
ಸಂಜಯ್ ರಾವುತ್   

ಮುಂಬೈ: ರಾಜ್ಯದ ಜನರ ಹಿತಾಸಕ್ತಿ ಬಗ್ಗೆ ಬಿಜೆಪಿಗೆ ಕಾಳಜಿ ಇದ್ದರೆ, ಸೋಮವಾರದಿಂದ ಆರಂಭವಾಗಲಿರುವ ಎರಡು ದಿನಗಳ ವಿಧಾನಸಭೆಯ ಮುಂಗಾರು ಅಧಿವೇಶನ ಸುಗಮವಾಗಿ ನಡೆಯಲು ಸಹಕರಿಸಬೇಕು ಎಂದು ಶಿವಸೇನೆ ಸಂಸದ ಸಂಜಯ್ ರಾವುತ್‌ ಹೇಳಿದ್ದಾರೆ.

ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಂಕ್ರಾಮಿಕ ರೋಗದ ಹೆಸರಲ್ಲಿ ಸರ್ಕಾರವನ್ನು ಮೂಲೆಗುಂಪು ಮಾಡುವುದು ಸರಿಯಲ್ಲ. ಇಂಥ ತಂತ್ರಗಳನ್ನು ಬೇರೆ ಕಡೆ ಬಳಸಿಕೊಳ್ಳಿ. ಇಂಥ ತಂತ್ರಗಳು, ಪ್ರಸ್ತುತ ಎದುರಿಸುತ್ತಿರುವ ಕೋವಿಡ್‌ ಲಸಿಕೆಯ ಕೊರತೆಯನ್ನಾಗಲಿ, ನಿರುದ್ಯೋಗ ಸಮಸ್ಯೆ ಮತ್ತು ಆರ್ಥಿಕ ಸಂಕಷ್ಟವನ್ನು ಪರಿಹರಿಸುವುದಿಲ್ಲ‘ ಎಂದು ಹೇಳಿದ್ದಾರೆ.

‘ಪ್ರಸ್ತುತ ರಾಜ್ಯದ ಜನರು ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಸರ್ಕಾರ ಸದನದಲ್ಲಿ ಚರ್ಚಿಸಬೇಕಿದೆ. ನಿಜವಾಗಲೂ ಬಿಜೆಪಿಯವರು ರಾಜ್ಯದ ಜನರ ಕ್ಷೇಮವನ್ನು ಬಯಸುವುದಾದರೆ, ಈ ಎರಡು ದಿನಗಳ ಮುಂಗಾರು ಅಧಿವೇಶನ ನಡೆಯಲು ಅವಕಾಶ ಮಾಡಿಕೊಡಬೇಕು‘ ಎಂದು ಒತ್ತಾಯಿಸಿದ್ದಾರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.