ಚಂಡೀಗಢ: ಕೇಂದ್ರ ಸರ್ಕಾರದ ಕೃಷಿ ಕಾನೂನಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಚರ್ಚಿಸಲು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕರೆದಿರುವ ಸರ್ವಪಕ್ಷಗಳ ಸಭೆಗೆ ಬಿಜೆಪಿ ಗೈರಾಗಿದೆ.
ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯ ಸಿಂಘು, ಘಾಜಿಪುರ್ ಮತ್ತು ಟಿಕ್ರಿ ಗಡಿ ಪ್ರದೇಶಗಳಲ್ಲಿ ರೈತರು ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.