ADVERTISEMENT

ಜನರ ದಾರಿ ತಪ್ಪಿಸುತ್ತಿರುವ ರಾಜಕೀಯ ಪಕ್ಷಗಳ ಚುನಾವಣಾ ಭರವಸೆಗಳು: ಮಾಯಾವತಿ ಟೀಕೆ

ಪಿಟಿಐ
Published 3 ಡಿಸೆಂಬರ್ 2021, 7:52 IST
Last Updated 3 ಡಿಸೆಂಬರ್ 2021, 7:52 IST
ಬಹುಜನ ಸಮಾಜ ಪಕ್ಷದ ವರಿಷ್ಠೆ ಮಾಯಾವತಿ
ಬಹುಜನ ಸಮಾಜ ಪಕ್ಷದ ವರಿಷ್ಠೆ ಮಾಯಾವತಿ   

ಲಖನೌ: ಚುನಾವಣೆ ಸಮಯದಲ್ಲಿ ಭರವಸೆ ನೀಡುವ ಬಿಜೆಪಿ, ಎಸ್‌ಪಿ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅವುಗಳನ್ನು ಮರೆಯುವ ಮೂಲಕ ಉತ್ತರ ಪ್ರದೇಶದ ಜನರನ್ನು ತಪ್ಪುದಾರಿಗೆಳೆಯುತ್ತಿವೆ ಎಂದು ಬಹುಜನ ಸಮಾಜ ಪಕ್ಷದ ವರಿಷ್ಠೆ ಮಾಯಾವತಿ ಶುಕ್ರವಾರ ಆರೋಪಿಸಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಈ ಮೂರು ಪಕ್ಷಗಳ ಬಗ್ಗೆ ರಾಜ್ಯದ ಜನರು ಎಚ್ಚರಿಕೆಯಿಂದ ಇರುವಂತೆ ಹೇಳಿದ್ದಾರೆ.

ಬಿಜೆಪಿ, ಎಸ್‌ಪಿ ಮತ್ತು ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಚುನಾವಣೆಗೂ ಮುನ್ನ ಪ್ರತಿದಿನವೂ ಭರವಸೆಗಳ ಸುರಿಮಳೆಗೈಯ್ಯುವ ಮೂಲಕ ಜನರನ್ನು ತಪ್ಪುದಾರಿಗೆಳೆಯುತ್ತವೆ. ಅಧಿಕಾರಕ್ಕೆ ಬಂದ ಬಳಿಕ ಅವು ಮಾಡಿದ್ದ ಬಹುತೇಕ ಭರವಸೆಗಳನ್ನು ಮರೆಯುವುದೇ ಇವುಗಳ ಇತಿಹಾಸ. ಹಾಗಾಗಿ, ಜನರು ಜಾಗೃತರಾಗಿರಬೇಕು' ಎಂದಿದ್ದಾರೆ.

ADVERTISEMENT

'ಬಿಜೆಪಿ ಮತ್ತು ಎಸ್‌ಪಿ ಅಧಿಕಾರದಲ್ಲಿದ್ದಾಗ ಈಗ ಅವರು ನೀಡುತ್ತಿರುವ ಭರವಸೆಗಳನ್ನು ಏಕೆ ಈಡೇರಿಸಲಿಲ್ಲ? ಮಹಿಳೆಯರಿಗೆ ಶೇ 40ರಷ್ಟು ಚುನಾವಣೆ ಟಿಕೆಟ್ ಮತ್ತು ಸ್ಕೂಟರ್ ನೀಡುವ ತನ್ನ ಭರವಸೆಯನ್ನು ಕಾಂಗ್ರೆಸ್ ಏಕೆ ಪೂರೈಸಲಿಲ್ಲ? ಈ ಮೂರು ಪಕ್ಷಗಳು ಅಧಿಕಾರದಲ್ಲಿದ್ದಾಗ ತಾವು ನೀಡಿದ್ದ ಆಶ್ವಾಸನೆಗಳನ್ನು ಏಕೆ ಪೂರ್ಣಗೊಳಿಸಲಿಲ್ಲ? ಈ ಬಗ್ಗೆ ಜನರು ಯೋಚಿಸಬೇಕಿದೆ' ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.