ADVERTISEMENT

ಜೈಪುರದಲ್ಲಿ ಮೇ 20–21ರಂದು ಬಿಜೆಪಿ ನಾಯಕರ ಸಭೆ: ಜೆ.ಪಿ. ನಡ್ಡಾ ಅಧ್ಯಕ್ಷತೆ

ಪಿಟಿಐ
Published 4 ಮೇ 2022, 10:51 IST
Last Updated 4 ಮೇ 2022, 10:51 IST
ಜೆ.ಪಿ. ನಡ್ಡಾ
ಜೆ.ಪಿ. ನಡ್ಡಾ   

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಮುಂಬರುವ ಚುನಾವಣೆಗಳಿಗೆ ಕಾರ್ಯತಂತ್ರ ರೂಪಿಸಲು ಹಾಗೂ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಲು ಬಿಜೆಪಿಯು ಮೇ 20 ಮತ್ತು 21ರಂದು ಜೈ‍ಪುರದಲ್ಲಿ ದೇಶದ ಎಲ್ಲ ರಾಜ್ಯಗಳ ಸಂಘಟನಾ ನಾಯಕರ ಅಧಿವೇಶನ ನಡೆಸಲಿದೆ.

ಅಧಿವೇಶನದ ಅಧ್ಯಕ್ಷತೆಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ವಹಿಸಿಕೊಳ್ಳಲಿದ್ದಾರೆ. ಪಕ್ಷದ ರಾಜ್ಯ ಘಟಕಗಳ ಅಧ್ಯಕ್ಷರು, ಉಸ್ತುವಾರಿಗಳು ಮತ್ತು ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಲ್ಲ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಎರಡು ದಿನದ ಅಧಿವೇಶನದ ಪೈಕಿ, ಒಂದು ದಿನ ಅಧಿವೇಶನ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಲಿದ್ದಾರೆ.

ADVERTISEMENT

ಎಲ್ಲ ರಾಜ್ಯಗಳ ಬಿಜೆಪಿ ನಾಯಕರ ಸಭೆಯು ಮೇ 20 ರಂದು ನಡೆಯಲಿದೆ. ಮರುದಿನ ಎಲ್ಲ ರಾಜ್ಯ ಪ್ರಧಾನ ಸಂಘಟನಾ ಕಾರ್ಯದರ್ಶಿಗಳು ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆ. ರಾಜ್ಯಗಳಲ್ಲಿ ಪಕ್ಷವು ಕೈಗೊಂಡಿರುವ ರಾಜಕೀಯ ಚಟುವಟಿಕೆಗಳ ಬಗ್ಗೆ ವರದಿ ತರುವಂತೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂ‌ಗ್‌ ಅವರು ರಾಜ್ಯ ಘಟಕಗಳ ಅಧ್ಯಕ್ಷರು ಮತ್ತು ಪ್ರಧಾನ ಸಂಘಟನಾ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.