ADVERTISEMENT

ಪಂಜಾಬ್‌ನಲ್ಲಿ ಸೋತ ಬಿಜೆಪಿ ಕೇಜ್ರಿವಾಲ್ ಅವರನ್ನು ಕೊಲ್ಲಲು ಮುಂದಾಗಿದೆ: ಸಿಸೋಡಿಯಾ

ಪಿಟಿಐ
Published 30 ಮಾರ್ಚ್ 2022, 14:27 IST
Last Updated 30 ಮಾರ್ಚ್ 2022, 14:27 IST
ಮನೀಶ್ ಸಿಸೋಡಿಯಾ, ದೆಹಲಿಯ ಉಪ ಮುಖ್ಯಮಂತ್ರಿ: ಪಿಟಿಐ ಚಿತ್ರ
ಮನೀಶ್ ಸಿಸೋಡಿಯಾ, ದೆಹಲಿಯ ಉಪ ಮುಖ್ಯಮಂತ್ರಿ: ಪಿಟಿಐ ಚಿತ್ರ   

ನವದೆಹಲಿ: ಪಂಜಾಬ್‌ನಲ್ಲಿ ಸೋತ ಬಳಿಕ ಬಿಜೆಪಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹತ್ಯೆ ಮಾಡಲು ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.

ಈ ಕುರಿತಂತೆ ಅಧಿಕೃತ ದೂರು ದಾಖಲಿಸುವುದಾಗಿ ಅವರು ಹೇಳಿದ್ದಾರೆ.

‘ಕಾಶ್ಮೀರ ಫೈಲ್ಸ್’ಸಿನಿಮಾ ಬಗ್ಗೆ ಕೇಜ್ರಿವಾಲ್ ಹೇಳಿಕೆ ಖಂಡಿಸಿ ಅವರ ಮನೆ ಮುಂದೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಬೆಳಗ್ಗೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ಅವರು ಸಿಎಂ ಮನೆಯ ತಡೆ ದ್ವಾರ ಧ್ವಂಸಗೊಳಿಸಿ, ಸಿಸಿಟಿವಿ ಒಡೆದು ಹಾಕಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಸಿಸೋಡಿಯಾ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ADVERTISEMENT

‘ಪಂಜಾಬ್‌ನಲ್ಲಿ ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಾಗದ ಬಿಜೆಪಿ, ಅವರನ್ನು ಕೊಲ್ಲಲು ಮುಂದಾಗಿದೆ. ಮುಖ್ಯಮಂತ್ರಿ ಮನೆ ಮೇಲೆ ಇಂದು ನಡೆದ ದಾಳಿಯು ಪೊಲೀಸರ ನೆರವಿನಿಂದ ಬಿಜೆಪಿ ಕೇಜ್ರಿವಾಲ್ ಅವರನ್ನು ಕೊಲ್ಲಲು ಮುಂದಾಗಿತ್ತು ಎಂಬುದನ್ನು ತೋರಿಸುತ್ತದೆ. ಇದರ ವಿರುದ್ಧ ನಾವು ಅಧಿಕೃತ ದೂರು ದಾಖಲಿಸುತ್ತೇವೆ’ಎಂದು ಸಿಸೋಡಿಯಾ ಹೇಳಿದರು.

ಕೇಜ್ರಿವಾಲ್ ಅವರ ಮನೆ ಮೇಲಿನ ‘ಜೀವ ಬೆದರಿಕೆಯ ದಾಳಿ ಯೋಜಿತ ಕೃತ್ಯವಾಗಿದೆ’ಎಂದು ಅವರು ಆರೋಪಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.