ADVERTISEMENT

ಅಸ್ಸಾಂ ರಾಜ್ಯವನ್ನು ಒಳ ನುಸುಳುಕೋರರ ಕೇಂದ್ರವಾಗಿಸಲು ಬಿಡುವುದಿಲ್ಲ: ಅಮಿತ್ ಶಾ

ಏಜೆನ್ಸೀಸ್
Published 31 ಮಾರ್ಚ್ 2021, 11:07 IST
Last Updated 31 ಮಾರ್ಚ್ 2021, 11:07 IST
ಅಮಿತ್‌ ಶಾ
ಅಮಿತ್‌ ಶಾ   

ಗುವಾಹಟಿ: ಅಸ್ಸಾಂ ಅನ್ನು ಒಳ ನುಸುಳುಕೋರರ ಕೇಂದ್ರವಾಗಿಸಲು ಬಿಜೆಪಿಯು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬುಧವಾರ ಹೇಳಿದ್ದಾರೆ.

ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆ ರ‍್ಯಾಲಿ ಉದ್ದೇಶಿಸಿ ಮಾತನಾಡಿರುವ ಅವರು ಕಾಂಗ್ರೆಸ್‌ ಹಾಗೂ ಎಐಯುಡಿಎಫ್‌ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

'ಅಸ್ಸಾಂಮೀಸ್ ಮತ್ತು ಬಂಗಾಳಿಗಳ ನಡುವೆ, ಹಿಂದೂಗಳು ಮತ್ತು ಮುಸ್ಲಿಮರ ನಡುವೆ, ಕಣಿವೆ ಅಸ್ಸಾಂ ಮತ್ತು ಕೆಳಸ್ತರದ ಅಸ್ಸಾಂನ ಜನರ ನಡುವೆ ಕಾಂಗ್ರೆಸ್‌ ಪಕ್ಷವು ಬಿರುಕು ಸೃಷ್ಟಿಸಿದೆ . ನರೇಂದ್ರ ಮೋದಿ ಅವರು ಎಲ್ಲರ ವಿಕಾಸವನ್ನು ಬಯಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಅಸ್ಸಾಂನಲ್ಲಿ ಶಾಂತಿ ಮತ್ತು ಅಭಿವೃದ್ಧಿಯನ್ನು ಬಿಜೆಪಿ ಖಾತ್ರಿಪಡಿಸಿದೆ' ಎಂದು ಶಾ ಹೇಳಿದ್ದಾರೆ.

ADVERTISEMENT

ಇದೇ ವೇಳೆ ಎಐಯುಡಿಎಫ್‌ ಪಕ್ಷದ ಅಧ್ಯಕ್ಷ ಬದ್ರೂದ್ದೀನ್ ಅಜ್ಮಲ್‌ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಅಮಿತ್‌ ಶಾ, 'ಅಸ್ಸಾಂನ ಅಧಿಕಾರ ಯಾರ ಬಳಿ ಇರಬೇಕು ಎಂಬುದನ್ನು ನಮ್ಮ ಪಕ್ಷ ತೀರ್ಮಾನಿಸಲಿದೆ ಎಂದು ಅಜ್ಮಲ್‌ ಹೇಳಿದ್ದಾರೆ. ಆದರೆ, ಅಧಿಕಾರವನ್ನು ಯಾರ ಕೈಗಳಿಗೆ ನೀಡಬೇಕೆಂದು ಇಲ್ಲಿನ ಜನರು ನಿರ್ಧರಿಸಲಿದ್ದಾರೆ. ಅಸ್ಸಾಂ ರಾಜ್ಯವನ್ನು ಒಳ ನುಸುಳುಕೋರರ ಕೇಂದ್ರವಾಗಿಸಲು ಬಿಜೆಪಿಯು ಅವಕಾಶ ನೀಡುವುದಿಲ್ಲ' ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.