ADVERTISEMENT

ಬಿಜೆಪಿ ಕಾರ್ಯಕರ್ತರ ಬಂಧನ

ಪಿಟಿಐ
Published 3 ಫೆಬ್ರುವರಿ 2020, 20:02 IST
Last Updated 3 ಫೆಬ್ರುವರಿ 2020, 20:02 IST

ದಿಬ್ರೂಗರ್ (ಅಸ್ಸಾಂ): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಕೇಂದ್ರ ಸಚಿವರ ಮನೆ ಮೇಲೆ ದಾಳಿ ನಡೆಸಿದ್ದ ಆರೋಪದಡಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿ ಮೂವರನ್ನು ಬಂಧಿಸಲಾಗಿದೆ.

ಆಹಾರ ಸಂಸ್ಕರಣೆ ಖಾತೆ ರಾಜ್ಯ ಸಚಿವ ತೇಲಿ ನಿವಾಸದ ಮೇಲೆ ಡಿ. 11ರಂದು ದಾಳಿ ನಡೆದಿತ್ತು. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಆಧರಿಸಿ ಭಾನುವಾರ ಮೂವರನ್ನು ಬಂಧಿಸಲಾಯಿತು ಎಂದು ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಜಿತ್‌ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಈವರೆಗೆ ಒಟ್ಟು 18 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ದೇಬಜಿತ್‌ ಹಜಾರಿಕಾ ಮತ್ತು ವಿಕಿ ಸೋನಾರ್ ಅವರು ಪಕ್ಷದ ಕಾರ್ಯಕರ್ತರು ಎಂಬುದನ್ನು ಬಿಜೆಪಿ ಕೂಡಾ ದೃಢಪಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.