ಕೋಲ್ಕತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಶಾಹಿದ್ ಮಿನಾರ್ನಲ್ಲಿ ಆಯೋಜಿಸಿದ್ದ ಕೇಂದ್ರ ಗೃಹ ಸಚಿವಅಮಿತ್ ಶಾ ಅವರ ಸಮಾವೇಶಕ್ಕೆ ತೆರಳುತ್ತಿದ್ದ ಪಕ್ಷದ ಕಾರ್ಯಕರ್ತರು ‘ಗೋಲಿ ಮಾರೋ...’ ಘೋಷಣೆ ಕೂಗುತ್ತಾ ಹೋಗಿರುವುದಾಗಿ ವರದಿಯಾಗಿದೆ.
ಪಕ್ಷದ ಬಾವುಟ ಹಿಡಿದು ಸಮಾವೇಶದ ಕಡೆಗೆ ಹೋಗುತ್ತಿದ್ದ ಕಾರ್ಯಕರ್ತರ ಪೈಕಿ ಒಂದು ಗುಂಪು ಈ ಘೋಷಣೆ ಮೊಳಗಿಸಿದೆ.
ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೋಲ್ಕತ್ತಾ ಪೊಲೀಸರನ್ನು ಸಂಪರ್ಕಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹಾಡು ಮಾಡುವ ಯಾವುದೇ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಮಾವೇಶಕ್ಕೆ ಇಂದು ಕೋಲ್ಕತಾಗೆ ತೆರಳಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರವಾದ ಸಮಾವೇಶಗಳಲ್ಲಿ ‘ಗೋಲಿ ಮಾರೋ...’ ಘೋಷಣೆಗಳು ಮೊಳಗಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಈ ಘೋಷಣೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದೆ ಎಂಬ ಆರೋಪಗಳೂ ಕೇಳಿ ಬಂದಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.