ADVERTISEMENT

ಸೆಕ್ಷನ್‌ 144 ಉಲ್ಲಂಘನೆ: ಟಿಕಾಯತ್‌ ವಿರುದ್ಧ ಪ್ರಕರಣ

ಪಿಟಿಐ
Published 2 ಮೇ 2021, 18:02 IST
Last Updated 2 ಮೇ 2021, 18:02 IST
ರಾಕೇಶ್‌ ಟಿಕಾಯತ್‌
ರಾಕೇಶ್‌ ಟಿಕಾಯತ್‌   

ಅಂಬಾಲಾ (ಹರಿಯಾಣ): ಸೆಕ್ಷನ್‌ 144 ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾರತೀಯ ಕಿಸಾನ್‌ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್‌ ಟಿಕಾಯತ್‌ ಮತ್ತು ಇತರ 12 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಟಿಕಾಯತ್‌ ಸೇರಿದಂತೆ ಬಿಕೆಯು ನಾಯಕರು ಕಳೆದ ಶನಿವಾರ ದುರಲಿ ಗ್ರಾಮದಲ್ಲಿ ‘ಕಿಸಾನ್ ಮಜ್ದೂರ್ ಮಹಾ ಪಂಚಾಯತ್‌’ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

‘ಜಿಲ್ಲೆಯಲ್ಲಿ ಸೆಕ್ಷನ್‌ 144 ಜಾರಿಯಲ್ಲಿರುವುದರಿಂದ ‘ಮಹಾ ಪಂಚಾಯತ್‌’ ನಡೆಸದ್ದಂತೆ ಬಿಕೆಯು ಮುಖಂಡರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೂ, ಎಚ್ಚರಿಕೆಯನ್ನು ಪರಿಗಣಿಸದೆ ಅವರು ಕಾರ್ಯಕ್ರಮ ಆಯೋಜಿಸಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.