ADVERTISEMENT

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷರ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ

ಪಿಟಿಐ
Published 12 ನವೆಂಬರ್ 2020, 15:43 IST
Last Updated 12 ನವೆಂಬರ್ 2020, 15:43 IST
ದಾಳಿಯಲ್ಲಿ ಹಾನಿಗೀಡಾಗಿರುವ ವಾಹನ
ದಾಳಿಯಲ್ಲಿ ಹಾನಿಗೀಡಾಗಿರುವ ವಾಹನ    

ಕೊಲ್ಕತ್ತಾ: ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲೆಂದು ಅಲಿಪುರ್ದಾರ್ ಜಿಲ್ಲೆಯ ಜೈಗಾಂವ್‌ಗೆ ತೆರಳುತ್ತಿದ್ದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಅವರ ಬೆಂಗಾವಲು ವಾಹನಗಳ ಮೇಲೆ ಗುರುವಾರ ಕಲ್ಲು ತೂರಲಾಗಿದೆ. ಅಲ್ಲದೆ, ಕಪ್ಪು ಬಾವುಟ ತೋರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಕಾರ್ಯಕರ್ತರು ಘೋಷ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇಲ್ಲಿಂದ ಹಿಂದಕ್ಕೆ ಹೋಗುವಂತೆ ಒತ್ತಾಯಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತಿಭಟನಾಕಾರರು ಮತ್ತು ಬಿಜೆಪಿ ಕಾರ್ಯಕರ್ತರನ್ನು ಚದುರಿಸಿ, ಪರಿಸ್ಥಿತಿ ತಿಳಿಗೊಳಿಸಿದರು.

ದಾಳಿಯಲ್ಲಿ ಘೋಷ್ ಅವರ ವಾಹನ ಭಾಗಶಃ ಹಾನಿಯಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ADVERTISEMENT

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಘೋಷ್, 'ಇದು ಹೊಸತೇನಲ್ಲ, ಈ ಹಿಂದೆ ನನ್ನ ಮೇಲೆ ಹಲವು ಬಾರಿ ಹಲ್ಲೆ ಮಾಡಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯ ಸೋಲಿನ ಭೀತಿಯಿಂದ ಟಿಎಂಸಿ ಮತ್ತು ಅವರ ಸ್ನೇಹಿತರು ಹತಾಶರಾಗಿದ್ದಾರೆ. ಹೀಗಾಗಿಯೇ ನಮ್ಮ ಮೇಲೆ ದಾಳಿ ಮಾಡಿದ್ದಾರೆ. ಇಲ್ಲಿ ಜನತಂತ್ರವಿದೆಯೇ? ಅವರ ತಂತ್ರಗಳು ಕೆಲಸ ಮಾಡುವುದಿಲ್ಲ. ಜನರು ನಮ್ಮೊಂದಿಗಿದ್ದಾರೆ. ರಾಜಕೀಯ ಹಿಂಸಾಚಾರವನ್ನು ತಡೆಯಲು ನಮಗೆ ಬಂಗಾಳದಲ್ಲಿ ಬದಲಾವಣೆ ಬೇಕು,' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.