ಮುಂಬೈ: ಬಾಲಿವುಡ್ ನಟಿ ಕಂಗನಾ ರನೋಟ್ ವಿವಾದಕ್ಕೆ ಸಂಬಂಧಿಸಿದಂತೆ ಎನ್ಸಿಪಿ ನಾಯಕ ಶರದ್ ಪವಾರ್ ಮೌನ ಮುರಿದು ಮಾತನಾಡಿದ್ದಾರೆ.
ಕಂಗನಾ ಅವರ ಕಚೇರಿ ಬಗ್ಗೆ ನನಗೆ ಯಾವುದೇ ಮಾಹಿತಿ ಗೊತ್ತಿಲ್ಲ, ಆದರೆ, ಅದು ಅನಧಿಕೃತ ಕಟ್ಟಡ ಎಂದು ಪತ್ರಿಕೆಗಳಲ್ಲಿ ಬಂದಿರುವುದನ್ನು ಓದಿದ್ದೇನೆ ಎಂದು ಹೇಳಿದ್ದಾರೆ.
ಮುಂಬೈನಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣ ಹೊಸದಲ್ಲ, ಹಿಂದಿನಿಂದಲೂ ಇವೆ. ಬಿಎಂಸಿ ನಿಯಮಗಳ ಪ್ರಕಾರ ನಡೆದುಕೊಂಡರೆ ಅದು ಸರಿ ಎಂದು ಶರದ್ ಪವಾರ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.