ನವದೆಹಲಿ: ಉದ್ಯೋಗ ನಷ್ಟ, ಕಾರ್ಮಿಕ ಕಾನೂನುಗಳ ತಿದ್ದುಪಡಿ ಮತ್ತು ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಭಾರತೀಯ ಮಜ್ದೂರ್ ಸಂಘವು (ಆರ್ಎಸ್ಎಸ್ನ ಕಾರ್ಮಿಕ ಸಂಘ) ಜುಲೈ 24ರಿಂದ ಒಂದು ವಾರ ಕಾಲ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಪ್ರತಿಭಟನೆಯ ಸಮಯದಲ್ಲಿ ಬಿಎಂಎಸ್ನ ಕಾರ್ಯಕರ್ತರು ಪ್ರತಿ ವಲಯದ ತಳಮಟ್ಟದ ಕಾರ್ಮಿಕರನ್ನು ಸಂಪರ್ಕಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇತ್ತೀಚಿನ ನೀತಿಗಳ ತೀವ್ರ ಪರಿಣಾಮಗಳ ಬಗ್ಗೆ ತಿಳಿವಳಿಕೆ ಮೂಡಿಸಲಿದ್ದಾರೆ. ಪ್ರತಿದಿನವೂ ಒಂದೊಂದು ಘಟಕವು ’ಸರ್ಕಾರ್ ಜಾಗೋ ಸಪ್ತಾಹ’ ನಡೆಸಲಿದೆ ಎಂದು ಬಿಎಂಎಸ್ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.