ಕತಿಹಾರ್ (ಬಿಹಾರ): ಇಲ್ಲಿನ ಗಂಗಾ ಮತ್ತು ಬರಾಂಡಿ ನದಿಗಳ ಸಂಗಮ ಪ್ರದೇಶದಲ್ಲಿ ದೋಣಿ ಮಗುಚಿ ಏಳು ಮಂದಿ ಕೃಷಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.
‘10 ಮಂದಿ ಕಾರ್ಮಿಕರು ಶನಿವಾರ ಸಂಜೆ ಕೆಲಸ ಮುಗಿಸಿ ದೋಣಿಯಲ್ಲಿ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೂವರು ಈಜಿ ದಡ ಸೇರಿದ್ದಾರೆ’ ಎಂದೂ ತಿಳಿಸಿದ್ದಾರೆ.
ಎನ್ಡಿಆರ್ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ನದಿಯಲ್ಲಿ ನಾಪತ್ತೆಯಾದವರ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದೂ ವಿವರಿಸಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರ ಕುಟುಂಬಕ್ಕೆ ₹ 4 ಲಕ್ಷ ಪರಿಹಾರ ಘೋಷಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.