ಕಡಲೂರು (ತಮಿಳುನಾಡು): ಇಲ್ಲಿನ ರಾಸಾಯನಿಕ ಘಟಕವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಅಮೋನಿಯಾ ಅನಿಲ ಸೋರಿಕೆಯಾಗಿದ್ದರಿಂದ ಮಹಿಳೆ ಸೇರಿದಂತೆ ನಾಲ್ವರು ಕಾರ್ಮಿಕರು ಗುರುವಾರ ಮೃತಪಟ್ಟಿದ್ದಾರೆ.
ದುರಂತದಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
‘ಮೃತರು ಬೆಂಕಿಗೆ ಆಹುತಿಯಾಗಿಲ್ಲ. ಅವರು ಉಸಿರುಕಟ್ಟುವಿಕೆಯಿಂದ ಸತ್ತಿದ್ದಾರೆ’ ಎಂದು ಕಡಲೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಸುದ್ದಿಗಾರರಿಗೆ ತಿಳಿಸಿದರು.
ಮೃತರ ಕುಟುಂಬದವರಿಗೆ ತಲಾ ₹ 3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.