ADVERTISEMENT

ಕೇರಳ ಸಚಿವಾಲಯಕ್ಕೆ ಬಾಂಬ್​​​ ಬೆದರಿಕೆ: ಪೊಲೀಸರಿಂದ ತೀವ್ರ ಶೋಧ

ಕೇರಳ ಸರ್ಕಾರದ ಸಚಿವಾಲಯಕ್ಕೆ ಇಂದು ಬೆಳಿಗ್ಗೆ ಬಾಂಬ್​​​ ಬೆದರಿಕೆ ಬಂದಿದೆ.

ಪಿಟಿಐ
Published 9 ನವೆಂಬರ್ 2023, 9:33 IST
Last Updated 9 ನವೆಂಬರ್ 2023, 9:33 IST
<div class="paragraphs"><p>ತಿರುವನಂತಪುರಂನಲ್ಲಿರುವ ಕೇರಳ ಸಚಿವಾಲಯ</p><p></p></div>

ತಿರುವನಂತಪುರಂನಲ್ಲಿರುವ ಕೇರಳ ಸಚಿವಾಲಯ

   

(ಫೋಟೋ ಕೃಪೆ–ಪಿಟಿಐ)

ADVERTISEMENT

ತಿರುವನಂತಪುರಂ(ಕೇರಳ): ಬಾಂಬ್ ಬೆದರಿಕೆ ಕರೆ ಹಿನ್ನೆಲೆ ಪೊಲೀಸರು ಗುರುವಾರ ಕೇರಳ ರಾಜ್ಯ ಸಚಿವಾಲಯ ಮತ್ತು ಆಡಳಿತ ಸಂಕೀರ್ಣದಲ್ಲಿ ತೀವ್ರ ಶೋಧ ನಡೆಸಿದ್ದಾರೆ.

ಮೂಲಗಳ ಪ್ರಕಾರ, ಇಂದು ಬೆಳಗ್ಗೆ 11 ಗಂಟೆಗೆ ಸಚಿವಾಲಯದ ಸಂಕೀರರ್ಣದಲ್ಲಿ ಬಾಂಬ್ ಸ್ಪೋಟಿಸುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸಚಿವಾಲಯದ ಆವರಣದ ಒಳಗೆ, ಹೊರಗೆ ಹಾಗೂ ಸುತ್ತಮುತ್ತ ನಿಲ್ಲಿಸಿದ ವಾಹನಗಳು ಮತ್ತು ಹತ್ತಿರದ ಅಂಗಡಿಗಳಲ್ಲಿ ಹುಡುಕಾಟ ನಡೆಸಿದ್ದಾರೆ.

ಈ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಈ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.