ADVERTISEMENT

ಉಭಯ ಸದನಗಳಲ್ಲಿ ನಿಲ್ಲದ ಅದಾನಿ ಕದನ: ಮಧ್ಯಾಹ್ನ 2 ಗಂಟೆಗೆ ಕಲಾಪ ಮುಂದೂಡಿಕೆ

ಕಲಾಪ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮುಂದೂಡಿಕೆ

ಪಿಟಿಐ
Published 28 ಮಾರ್ಚ್ 2023, 6:18 IST
Last Updated 28 ಮಾರ್ಚ್ 2023, 6:18 IST
   

ನವದೆಹಲಿ: ಅದಾನಿ ವಿವಾದ ಸಂಬಂಧ ಮಂಗಳವಾರವೂ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.

ಉಭಯ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.

ಮಂಗಳವಾರವೂ ಕಪ್ಪು ದಿರಿಸು ಧರಿಸಿಕೊಂಡು ಬಂದಿದ್ದ ವಿಪಕ್ಷಗಳ ಸದಸ್ಯರು, ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ, ಸದನದ ಬಾವಿಗೆ ಇಳಿದು ಘೋಷಣೆ ಮೊಳಗಿಸಿದರು.

ADVERTISEMENT

ಕೆಲ ಸದಸ್ಯರು ಕಾಗದ ಪತ್ರಗಳನ್ನು ಸ್ಪೀಕರ್‌ ಕುರ್ಚಿಯತ್ತ ತೂರಿದರು. ಪರಿಣಾಮ ಕಲಾಪ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮುಂದೂಡಬೇಕಾಯಿತು.

ರಾಜ್ಯಸಭೆಯಲ್ಲೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ಅದಾನಿ ಪ್ರಕರಣ ಸಂಬಂಧ ಜಂಟಿ ಸದನ ಸಮಿತಿ ರಚನೆಗೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿದರು. ಕಲಾಪ ಮುಂದುವರಿಸಲಾಗದೆ 2 ಗಂಟೆಗೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.