ADVERTISEMENT

ರಾಜ್ಯ ಸರ್ಕಾರಗಳನ್ನು ಉರುಳಿಸುವುದೇ ಬಿಜೆಪಿಯ ಕೆಲಸ: ಮಮತಾ ಬ್ಯಾನರ್ಜಿ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜುಲೈ 2022, 10:31 IST
Last Updated 21 ಜುಲೈ 2022, 10:31 IST
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ   

ಕೋಲ್ಕತ್ತ: ಎಲ್ಲ ರಾಜ್ಯಗಳಲ್ಲಿರುವ ಬೇರೆ ಪಕ್ಷಗಳ ಸರ್ಕಾರಗಳನ್ನು ಉರುಳಿಸುವುದೇ ಬಿಜೆಪಿಯ ಕೆಲಸ ಎಂದುಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗುರುವಾರ ವಾಗ್ದಾಳಿ ನಡೆಸಿದ್ದಾರೆ.

ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಗರದಲ್ಲಿಆಯೋಜಿಸಿರುವ ಹುತಾತ್ಮರ ದಿನ(ಜುಲೈ 21) ಸಮಾವೇಶದಲ್ಲಿ ಭಾಗವಹಿಸಿದಮಮತಾ ಬ್ಯಾನರ್ಜಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

'ಇದು (ಸರ್ಕಾರಗಳನ್ನು ಒಡೆಯುವುದು) ಬಿಜೆಪಿಯ ಕೆಲಸವಾಗಿದೆ. ಪಶ್ಚಿಮ ಬಂಗಾಳದಲ್ಲಿ ನಮ್ಮನ್ನು ಮಣಿಸಲು ಅವರು (ಬಿಜೆಪಿ) ಪ್ರಯತ್ನಿಸಿದರೂ, ಯಶಸ್ಸು ಕಾಣಲು ಸಾಧ್ಯವಾಗಲಿಲ್ಲ' ಎಂದು ಹೇಳಿದ್ದಾರೆ.

ADVERTISEMENT

ದೇಶದಲ್ಲಿನ ಹಣದುಬ್ಬರ ಏರಿಕೆಗೆ ಸಂಬಂಧಿಸಿದಂತೆಯೂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, 2024ರ ಸಾರ್ವತ್ರಿಕ ಚುನಾವಣೆ ಬಳಿಕ ಜನರು ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.