ನವದೆಹಲಿ: ಉದ್ಯಮಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಯಾವಾಗ ಹಸ್ತಾಂತರ ಮಾಡಲಾಗುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದು ಭಾರತದಲ್ಲಿನ ಬ್ರಿಟಿಷ್ ಹೈಕಮಿ ಷನರ್ ಸರ್ ಫಿಲಿಪ್ ಬಾರ್ಟನ್ ಹೇಳಿದ್ದಾರೆ.
‘ಬೇರೆ ದೇಶಕ್ಕೆ ಹೋಗಿ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳುವವರ ವಿಚಾರ ದಲ್ಲಿ ತಾವು ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಬ್ರಿಟನ್ನಿನ ಸರ್ಕಾರ ಮತ್ತು ನ್ಯಾಯಾಲಯಗಳು ಸ್ಪಷ್ಟತೆ ಹೊಂದಿವೆ. ರಾಷ್ಟ್ರಗಳ ಗಡಿ ದಾಟಿದ ಮಾತ್ರಕ್ಕೆ ಅಪರಾಧಿಗಳು ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳುವಂತೆ ಆಗಬಾರದು’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.