ಜೈಪುರ/ನವದೆಹಲಿ: ‘ರಾಜಸ್ಥಾನದ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಯು ಗುಂಡಿಕ್ಕಿ ಹತ್ಯೆ ಮಾಡಿದೆ’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
‘ಗಂಗಾನಗರ-ಬಿಕಾನೇರ್ ಗಡಿ ಬಳಿ ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿದ ಬಿಎಸ್ಎಫ್ ಯೋಧರು, ನುಸುಳುಕೋರನ ಮೇಲೆ ಗುಂಡಿನ ದಾಳಿ ನಡೆಸಿದರು’ ಎಂದು ಅವರು ಹೇಳಿದ್ದಾರೆ.
‘ನುಸುಳುಕೋರನ ಮೃತ ದೇಹವನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.