ಅಹಮದಾಬಾದ್: ಪಾಕಿಸ್ತಾನ ಪ್ರಜೆಯೊಬ್ಬರು ಭಾರತದ ಗಡಿ ನುಸುಳಲು ಯತ್ನಿಸುತ್ತಿರುವಾಗ ಗಡಿ ಭದ್ರತಾ ಪಡೆ ಯೋಧರ ಆತನನ್ನು ಬಂಧಿಸಿದ್ದಾರೆ.
ಬಂಧಿತ ಪಾಕ್ ಪ್ರಜೆಯನ್ನು ದಯಾ ರಾಮ್ ಎಂದು ಗುರುತಿಸಲಾಗಿದೆ.
ಭಾರತ–ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಗೆ ಹೊಂದಿಕೊಂಡಿರುವ ಗುಜರಾತ್ ರಾಜ್ಯದ ಬನಸ್ಕಾಂತ ಜಿಲ್ಲೆಯ ಬಾರ್ಡರ್ ಔಟ್ ಪೋಸ್ಟ್ ಸಮೀಪದ ನಾಡೇಶ್ವರಿ ಗೇಟ್ ಬಳಿ ಭಾರತಕ್ಕೆ ನುಸುಳಲು ಯತ್ನಿಸಿದಾಗ ಯೋಧರು ಬಂಧಿಸಿದ್ದಾರೆ.
ಬಂಧಿತ ಪಾಕ್ ಪ್ರಜೆಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.