ADVERTISEMENT

ಬಿಜೆಪಿ ಜೊತೆ ಮೈತ್ರಿಯಿಲ್ಲ: ರಾಜ್‌ಭರ್ ಸ್ಪಷ್ಟನೆ

ಪಿಟಿಐ
Published 20 ಮಾರ್ಚ್ 2022, 19:32 IST
Last Updated 20 ಮಾರ್ಚ್ 2022, 19:32 IST

ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿ ಜತೆ ಮತ್ತೆ ಮೈತ್ರಿ ಮಾಡಿಕೊಳ್ಳುವ ಕುರಿತ ಸುದ್ದಿಗಳನ್ನು ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭರ್ ಭಾನುವಾರ ತಳ್ಳಿಹಾಕಿದ್ದಾರೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಜತೆಗಿನ ಭೇಟಿ ಸುದ್ದಿಗಳನ್ನು ಅಲ್ಲಗಳೆದಿರುವ ಅವರು, ‘ನಾನು ದೆಹಲಿಗೂ ಹೋಗಿಲ್ಲ, ಯಾರನ್ನೂ ಭೇಟಿ ಮಾಡಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.ರಾಜ್‌ಭರ್ ಅವರು ದೆಹಲಿಯಲ್ಲಿ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂಬುದಾಗಿ ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿತ್ತು.

2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಎಸ್‌ಬಿಎಸ್‌ಪಿಮೈತ್ರಿ ಮಾಡಿಕೊಂಡಿತ್ತು. ಆದರೆ 2019ರ ಸಾರ್ವತ್ರಿಕ ಚುನಾವಣೆಗೂ ಮುನ್ನ ರಾಜ್‌ಭರ್ ಅವರು ಯೋಗಿ ಸಂಪುಟದಿಂದ ಹೊರಬಂದಿದ್ದರು. ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು2022ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಪಕ್ಷ ಆರು ಕ್ಷೇತ್ರಗಳಲ್ಲಿ ಗೆದ್ದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.