ADVERTISEMENT

ಉತ್ತರ ಪ್ರದೇಶ: ಠಾಣೆ ಎದುರೇ ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಬೆಳೆ ಹಾಳು ಮಾಡಿದ ದುಷ್ಕರ್ಮಿಗಳ ವಿರುದ್ಧ ಪೊಲೀಸರು ಕ್ರಮ ಜರುಗಿಸುತ್ತಿಲ್ಲ ಎಂಬ ಆರೋಪ

ಪಿಟಿಐ
Published 19 ಮೇ 2022, 18:37 IST
Last Updated 19 ಮೇ 2022, 18:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬದೌನ್‌ (ಉತ್ತರ ಪ್ರದೇಶ): ಬೆಳೆ ಹಾಳು ಮಾಡಿದ್ದ ವ್ಯಕ್ತಿಗಳ ವಿರುದ್ಧ ಪೊಲೀಸರು ಕ್ರಮ ಜರುಗಿಸುತ್ತಿಲ್ಲ ಎಂದು ಆರೋಪಿಸಿ ಉತ್ರರಪ್ರದೇಶದ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಚೇರಿ ಎದುರೇ ಬೆಂಕಿ ಹಚ್ಚಿಕೊಂಡಿದ್ದ ರೈತ ಮೃಪಟ್ಟಿದ್ದಾರೆ ಎಂದು ಅಧಿಕಾರಿಗಳುಗುರುವಾರ ತಿಳಿಸಿದ್ದಾರೆ.

ಕೃಷ್ಣಪಾಲ್‌ ಮೃತ ರೈತ. ಬುಧವಾರ ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ ಕೃಷ್ಣಪಾಲ್‌ ಅವರನ್ನು ಬರೇಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಘಟನೆ ಬೆನ್ನಲ್ಲೇ ಐವರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಿ, ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಎರಡು ವಾರಗಳ ಹಿಂದೆ ದುಷ್ಕರ್ಮಿಗಳು ಕಷ್ಣಪಾಲ್‌ ಅವರ ಹೊಲಕ್ಕೆ ಬೆಂಕಿ ಇಟ್ಟಿದ್ದರು. ಈ ಸಂಬಂಧ ಏ.25ರಂದು ಮಂಡಿ ಸಮಿತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಎಸ್ಎಸ್‌ಪಿಗೂ ಅರ್ಜಿ ನೀಡಲಾಗಿತ್ತು. ಆದರೆ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬೇಸತ್ತು ಕೃಷ್ಣಪಾಲ್‌ ಬುಧವಾರ ಬೆಂಕಿ ಹಚ್ಚಿಕೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.