ADVERTISEMENT

ಬುಲಂದ್‌ಶಹರ್‌ ಹಿಂಸಾಚಾರ: ನ್ಯಾಯಾಂಗ ತನಿಖೆಗೆ ಕಾಂಗ್ರೆಸ್‌ ಒತ್ತಾಯ

ಪಿಟಿಐ
Published 29 ಡಿಸೆಂಬರ್ 2018, 19:52 IST
Last Updated 29 ಡಿಸೆಂಬರ್ 2018, 19:52 IST

ನವದೆಹಲಿ: ಬುಲಂದ್‌ಶಹರ್‌ ಹಿಂಸಾಚಾರ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಉತ್ತರಪ್ರದೇಶ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್‌ ಒತ್ತಾಯಿಸಿದೆ.

ಬುಲಂದ್‌ಶಹರ್‌ನಲ್ಲಿ ನಡೆದ ಗುಂಪು ದಾಳಿಯ ವೇಳೆ ಪೊಲೀಸರು ಹತ್ಯೆಯಾಗಿ 25 ದಿನಗಳು ಕಳೆದಿವೆ. ಆದರೆ, ಈವರೆಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಉತ್ತರ ಪ್ರದೇಶ ಕಾಂಗ್ರೆಸ್‌ ಮುಖ್ಯಸ್ಥ ರಾಜ್‌ ಬಬ್ಬರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಗುಂಪು ಹಲ್ಲೆಗಳು ಹೆಚ್ಚಾಗಿವೆ. ಬುಲಂದ್‌ಶಹರ್‌ ಪ್ರಕರಣದಲ್ಲಿ ಮೊದಲು ಯಾರೋ ಆರೋಪಿಗಳಾಗಿದ್ದರು, ಆದರೆ ಈಗ ಯಾರೋ ಅಪರಾಧಿಗಳಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾದವರು ಬಿಜೆಪಿ ನಾಯಕರು ಎಂಬ ಮಾಹಿತಿ ಇದೆ. ಈ ನಿಟ್ಟಿನಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.