ADVERTISEMENT

ಮಹಾರಾಷ್ಟ್ರ: ಅನುಮತಿಯಿಲ್ಲದೇ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 7:26 IST
Last Updated 13 ಅಕ್ಟೋಬರ್ 2020, 7:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪುಣೆ: ಕೊಲ್ಹಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತರು ಅನುಮತಿಯಿಲ್ಲದೆ ಛತ್ರಪತಿ ಶಿವಾಜಿ ಅವರ ಪ್ರತಿಮೆ ಸ್ಥಾ‍‍ಪಿಸಿದ್ದು, ಬಳಿಕ ತೆರವುಗೊಳಿಸಲಾಯಿತು ಎಂದು ಪೊಲೀಸರು ಸೋಮವಾರ ತಿಳಿಸಿದರು.

ಶಾಹುವಾಡಿಯ ಬಂಬವಾಡೆ ಗ್ರಾಮದಲ್ಲಿ ಪ್ರತಿಮೆ ಸ್ಥಾಪಿಸಲಾಗಿತ್ತು. ತೆರವುಗೊಳಿಸಲು ಸ್ಥಳೀಯರು ವಿರೋಧಿಸಿದರಾದರೂ, ಅವರ ಮನವೊಲಿಸಿ ತೆರವುಗೊಳಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಬಾಲಚಂದ್ರ ದೇಶ್‌ಮುಖ್‌ ಅವರು ಹೇಳಿದರು.

ಈ ಸಂಬಂಧ ಪ್ರಕರಣವನ್ನು ಕೂಡ ದಾಖಲಿಸಲಾಗಿದೆ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.