ADVERTISEMENT

ವಿಧಾನ ಪರಿಷತ್: ಮಾ.15ಕ್ಕೆ ಚುನಾವಣೆ; ಧರ್ಮೇಗೌಡ ಸಾವಿನಿಂದ ತೆರವಾಗಿರುವ ಸ್ಥಾನ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 8:10 IST
Last Updated 18 ಫೆಬ್ರುವರಿ 2021, 8:10 IST
ವಿಧಾನ ಪರಿಷತ್‌–ಸಾಂದರ್ಭಿಕ ಚಿತ್ರ
ವಿಧಾನ ಪರಿಷತ್‌–ಸಾಂದರ್ಭಿಕ ಚಿತ್ರ   

ನವದೆಹಲಿ: ಉಪಸಭಾಪತಿಯಾಗಿದ್ದ ಎಸ್‌.ಎಲ್‌. ಧರ್ಮೇಗೌಡ ಅವರ ಸಾವಿನಿಂದ ತೆರವಾಗಿರುವ ರಾಜ್ಯ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.

ವಿಧಾನಸಭೆ ಸದಸ್ಯರಿಂದ ಈ ಸ್ಥಾನದ ಆಯ್ಕೆ ನಡೆಯಲಿದ್ದು, ಮಾರ್ಚ್‌ 15ರಂದು ಮತದಾನ ನಿಗದಿಪಡಿಸಲಾಗಿದೆ.

ಫೆಬ್ರುವರಿ 25ರಂದು ಈ ಸಂಬಂಧ ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್‌ 4 ಕೊನೆಯ ದಿನವಾಗಿದ್ದು, 5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಿಂದಕ್ಕೆ ಪಡೆಯಲು ಮಾರ್ಚ್‌ 8 ಕೊನೆಯ ದಿನವಾಗಿದೆ.

ADVERTISEMENT

ಮತದಾನವು 15ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 4ರವರೆಗೆ ನಡೆಯಲಿದ್ದು, ಸಂಜೆ 5ಕ್ಕೆ ಮತ ಎಣಿಕೆ ಕಾರ್ಯ ನಿಗದಿಯಾಗಿದೆ.

ಉಪ ಸಭಾಪತಿಯಾಗಿದ್ದ ಜೆಡಿಎಸ್‌ನ ಎಸ್‌.ಎಲ್‌. ಧರ್ಮೇಗೌಡ ಅವರು ಡಿಸೆಂಬರ್‌ 28ರಂದು ಕಡೂರು ಬಳಿ ರೈಲ್ವೆ ಟ್ರ್ಯಾಕ್‌ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.